ಯೋಗ ದಿನಕ್ಕಾಗಿ ಶ್ರೀನಗರಕ್ಕೆ ಹೊರಟ ಪ್ರಧಾನಿ ಮೋದಿ; ಈ ಬಾರಿ ಜಮ್ಮು-ಕಾಶ್ಮೀರದಲ್ಲಿ ಆಚರಣೆ ಏಕೆ?

ನವದೆಹಲಿ: ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳಿನ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಮೋದಿ ಅವರು ಶ್ರೀನಗರಕ್ಕೆ ತೆರಳಿದಿದ್ದಾರೆ. ಈ ಬಗ್ಗೆ ಖುದ್ದು ಮೋದಿ ಅವರೇ ಎಕ್ಸ್​ನಲ್ಲಿ ಪೋಸ್ಟ್​ ಹಾಕಿದ್ದಾರೆ. ಶ್ರೀನಗರಕ್ಕೆ ಹೊರಟೆ, ಅಲ್ಲಿ ನಾನು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಭೇಟಿ ವೇಳೆ ಮೋದಿ ಅವರು, 1500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಪ್ರಮುಖ ಯೋಜನೆಗಳು ಉದ್ಘಾಟನೆ…

Read More

ಹಾಸನದಲ್ಲಿ ಬೆಚ್ಚಿಬೀಳಿಸಿದ ಗುಂಡಿನ ದಾಳಿ – ಇಬ್ಬರ ಸಾವು

ಹಾಸನ: ಇಲ್ಲಿನ ಹೊಯ್ಸಳ‌ನಗರ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ಶೂಟೌಟ್ ಪ್ರಕರಣ ನಡೆದಿದ್ದು, ಇದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಆಸೀಫ್ (46) ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ (52) ಮೃತರು. ಇವರಿಬ್ಬರೂ ಸ್ನೇಹಿತರಾಗಿದ್ದು ಶುಂಠಿ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಮೃತ ಶರಾಪತ್ ಮೂಲತಃ ದೆಹಲಿಯವರಾಗಿದ್ದು, ಹಲವು ವರ್ಷಗಳಿಂದ ಹಾಸನದಲ್ಲಿ ವಾಸವಿದ್ದರು. ಇವರಿಬ್ಬರೂ ಮಧ್ಯಾಹ್ನ 12ರ ಸಮಯದಲ್ಲಿ ಕಾರಿನಲ್ಲಿ ಹೊಯ್ಸಳ ನಗರಕ್ಕೆ ಬಂದಿದ್ದರು. ಶೂಟೌಟ್‌ಗೆ ರಿಯಲ್‌ ಎಸ್ಟೇಟ್‌ ವಿಷಯವೇ ಕಾರಣ ಎಂದೆನ್ನಲಾಗಿದೆ. ಗುಂಡಿನ ದಾಳಿಯ…

Read More

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಶೃಂಗೇರಿ ಶಾರದಾ ಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಯಿತು. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇಗುಲದ ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣರಿಗೆ ಹಸ್ತಾಂತರಿಸಿದರು. ಈ ಪಾದುಕೆ ಮತ್ತು ಒಡ್ಯಾಣವನ್ನು ಬುಧವಾರ ಶ್ರೀದೇವಿಗೆ ತೊಡಿಸಿ ಅಲಂಕಾರ…

Read More

ಪುತ್ತೂರು : ಪೆಟ್ರೋಲ್‌- ಡೀಸೆಲ್‌ ದರ ಏರಿಕೆ ವಿರುದ್ದ ಬಿಜೆಪಿ ಪ್ರತಿಭಟನೆ

ಪುತ್ತೂರು: ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಜನರು ಕಂಗಾಲಾಗಿದ್ದಾರೆ. ಡಿಸೀಲ್,ಪೆಟ್ರೋಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳಿಗೂ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರದ ಈ ನಡೆಯನ್ನು ಕೇಂದ್ರ ಸರಕಾರದ ಗಮನಕ್ಕೆ ತರಬೇಕು ಎಂದು ರಾಜ್ಯಪಾಲರ ಮೂಲಕ ಮನವಿ ಸಲ್ಲಿಸಿದರು.

Read More

ಗಮನಿಸಿ : ʻರೇಷನ್‌ ಕಾರ್ಡ್ – ಆಧಾರ್‌ ಕಾರ್ಡ್‌ ಲಿಂಕ್‌ʼ ಮಾಡಲು ಈ ದಾಖಲೆಗಳು ಕಡ್ಡಾಯ

ನವದೆಹಲಿ: ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಈಗ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ನಿಮಗೆ ಸೆಪ್ಟೆಂಬರ್ 30 ರವರೆಗೆ ಸಮಯ ಸಿಗುತ್ತದೆ. ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ನಿಮಗೆ ಸೆಪ್ಟೆಂಬರ್ 30 ರವರೆಗೆ ಸಮಯವಿದೆ. ಇಲ್ಲಿಯವರೆಗೆ ಕೊನೆಯ ದಿನಾಂಕ ಜೂನ್ 30 ಆಗಿತ್ತು. ಈ ಬಗ್ಗೆ ಆಹಾರ ಮತ್ತು…

Read More

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಶೀಘ್ರವೇ ಬಸ್‌ ಪ್ರಯಾಣ ದರ ಹೆಚ್ಚಳದ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಶೀಘ್ರವೇ ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸುಳಿವು ನೀಡಿದ್ದಾರೆ. ಅವರು ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ಶಕ್ತಿ ಗ್ಯಾರಂಟಿ (Shakti Scheme) ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Read More

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ : ಭತ್ತ, ರಾಗಿ ಸೇರಿದಂತೆ 14 ಬೆಳೆಗಳಿಗೆ ‘ಕನಿಷ್ಠ ಬೆಂಬಲ ಬೆಲೆ’ ಘೋಷಣೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನ ಅನುಮೋದಿಸಿದೆ. ಈ ನಿರ್ಧಾರವನ್ನ ಪ್ರಕಟಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಶ್ವಿನಿ ವೈಷ್ಣವ್, “ಭತ್ತ, ರಾಗಿ, ಸಜ್ಜೆ, ಜೋಳ, ಮೆಕ್ಕೆಜೋಳ ಮತ್ತು ಹತ್ತಿ ಸೇರಿದಂತೆ 14 ಖಾರಿಫ್ ಋತುವಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ” ಎಂದು ಹೇಳಿದರು. “ಪ್ರಧಾನಿ ಮೋದಿಯವರ ಮೂರನೇ ಅವಧಿಯು ಬಹಳ ಮುಖ್ಯವಾಗಿದೆ, ಏಕೆಂದರೆ…

Read More

ಸೆಪ್ಟೆಂಬರ್ 15ರವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ

ಬೆಂಗಳೂರು: ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಿದ್ದ ಡೆಡ್‌ಲೈನ್ ಜೂನ್ 12ಕ್ಕೆ ಅಂತ್ಯವಾಗಿದ್ದು, ಇದೀಗ ರಾಜ್ಯ ಸರ್ಕಾರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಗಡುವು ವಿಸ್ತರಿಸಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡಲಾಗಿದೆ. ಸೆಪ್ಟೆಂಬರ್ 15ರ ಬಳಿಕ ಅವಧಿ ವಿಸ್ತರಿಸುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಿಸಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು…

Read More

ಹಲಸಿನ ಹಣ್ಣಿನ ಬೀಜದಿಂದ ಅನೇಕ ಆರೋಗ್ಯ ಲಾಭಗಳಿವೆ ಗೊತ್ತಾ..?

ಹಲಸಿನ ಹಣ್ಣಿನ ಬೀಜದಲ್ಲೂ ಸಾಕಷ್ಟು ಪೋಷಕಾಂಶಗಳಿವೆ. ಆರೋಗ್ಯದ ಲಾಭಗಳಿವೆ. ಹಲಸಿನ ಹಣ್ಣು ವಿಟಮಿನ್‌ ಬಿ ಹಾಗೂ ಪೊಟಾಶಿಯಂನಿಂದ ಸಮೃದ್ಧವಾಗಿದ್ದರೆ, ಅದರ ಬೀಜಗಳಲ್ಲಿ ಥೈಮೀನ್‌, ರೈಬೋಫ್ಲೇವಿನ್‌ ಕಣ್ಣು, ಚರ್ಮ ಹಾಗೂ ಕೂದಲ ಆರೋಗ್ಯಕ್ಕೆ ಬಹಳ ಉತ್ತಮ. ಬೀಜಗಳಲ್ಲಿ ಝಿಂಕ್‌, ಕಬ್ಬಿಣಾಂಶ, ಕ್ಯಾಲ್ಶಿಯಂ, ತಾಮ್ರ, ಪೊಟಾಶಿಯಂ ಹಾಗೂ ಮೆಗ್ನೀಶಿಯಂ ಮತ್ತಿತರ ಖನಿಜ ಲವಣಗಳಿಂದ ಸಮೃದ್ಧವಾಗಿದೆ. ಇವು ಬ್ಯಾಕ್ಟೀರಿಯಾಗಳಿಂದಾಗುವ ಸಮಸ್ಯೆಗಳಿಗೆ ಉತ್ತಮ ಆಹಾರವಾಗಿದ್ದು, ಇವುಗಳಿಂದಾಗುವ ಸಮಸ್ಯೆಗಳನ್ನು ಕಡಿಮೆ ಮಾಡುವ ತಾಕತ್ತನ್ನು ಹೊಂದಿದೆ. ಚರ್ಮದಲ್ಲಿ ಸುಕ್ಕಿನ ಸಮಸ್ಯೆಯೇ. ಸಣ್ಣ ವಯಸ್ಸಿನಲ್ಲಿಯೇ ವಯಸ್ಸಿಗೆ ಮೀರಿದ…

Read More

ಪುಸ್ತಕಗಳನ್ನು ಬೆಂಕಿಯಲ್ಲಿ ಸುಡಬಹುದು, ಆದರೆ ಬೆಂಕಿಯ ಜ್ವಾಲೆಗಳು ಜ್ಞಾನವನ್ನು ಅಳಿಸಲು ಸಾಧ್ಯವಿಲ್ಲ : ಪ್ರಧಾನಿ ಮೋದಿ

ನವದೆಹಲಿ : ಬಿಹಾರದ ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ವಿಶ್ವ ಪರಂಪರೆಯ ತಾಣವಾದ ಪ್ರಾಚೀನ “ನಳಂದ ಮಹಾವಿಹಾರ” ತಾಣಕ್ಕೆ ಹತ್ತಿರದಲ್ಲಿದೆ. ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದ ನಂತರ, ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.”ನಾನು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಮೊದಲ 10 ದಿನಗಳಲ್ಲಿ ನಳಂದಕ್ಕೆ ಭೇಟಿ ನೀಡುವ ಅವಕಾಶ ನನಗೆ ಸಿಕ್ಕಿದೆ. ನನ್ನ ಅದೃಷ್ಟದ ಹೊರತಾಗಿ, ನಾನು ಇದನ್ನು ಭಾರತದ…

Read More