Headlines

ಪಾಕಿಸ್ತಾನದ ಶಕ್ತಿಯನ್ನು ನಾನೇ ಖುದ್ದಾಗಿ ಪರಿಶೀಲಿಸಿದ್ದೇನೆ: ಮಣಿಶಂಕರ್ ಅಯ್ಯರ್ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ನವದೆಹಲಿ:ಪಾಕಿಸ್ತಾನದಲ್ಲಿ ಭಯೋತ್ಪಾದಕರ ‘ಅಪರಿಚಿತ ಹಂತಕರ ಉದ್ದೇಶಿತ ಹತ್ಯೆಗಳ’ ಹಿಂದೆ ಭಾರತವಿದೆ ಎಂಬ ಆರೋಪಗಳನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಬಗ್ಗೆ “ಭಾರತದಲ್ಲಿ ಕೆಲವರು ಏಕೆ ಅಳುತ್ತಿದ್ದಾರೆ” ಎಂದು ಪ್ರಶ್ನಿಸಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನದ ಜನರು ಚಿಂತಿತರಾಗಿದ್ದಾರೆಂದು ನನಗೆ ತಿಳಿದಿದೆ ಮತ್ತು ಅವರ ಚಿಂತೆಗಳಿಗೆ ನಾನೇ ಮೂಲ ಕಾರಣ ಎಂದು ಹೇಳಿದರು. ಪಾಕಿಸ್ತಾನ ಪರಮಾಣು ಬಾಂಬ್ ಹೊಂದಿರುವುದರಿಂದ ಭಾರತ ಅದನ್ನು ಗೌರವಿಸಬೇಕು ಎಂಬ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ,…

Read More

‘CD ಶಿವು’ ಪೆನ್ ಡ್ರೈವ್ ಪಟಿಂಗರ ಪಟಾಲಂನ ‘ಕ್ಯಾಪ್ಟನ್’: JDS

ಬೆಂಗಳೂರು: CD ಶಿವು ಸಾರಥ್ಯದ, ಪೆನ್ ಡ್ರೈವ್ ಪಟಾಲಂ ಪಟಿಂಗರ ಪಾರ್ಟಿ ಕಾಂಗ್ರೆಸ್ಸಿಗೆ ಜಾತ್ಯತೀತತೆ ಎನ್ನುವುದು ವೋಟಿಗಾಗಿ ಹಾಕುವ ಮುಖವಾಡವಷ್ಟೇ. ಅದನ್ನು ಕಾಶಿ ಗಂಗೆಯಲ್ಲಿ ವಿಸರ್ಜಿಸಿ, ಸಂಚುಕೋರ ಕಾಂಗ್ರೆಸ್ ಪಕ್ಷವಾಗಿ ಹೊರಹೊಮ್ಮಿ ಬಹಳ ದಿನವೇ ಕಳೆದಿದೆ. ಅದು ಗಾಂಧಿ ಕಾಂಗ್ರೆಸ್ ಅಲ್ಲ, ನೆಹರು ಕಾಂಗ್ರೆಸ್ ಅಲ್ಲ.. CD ವಿದ್ಯಾಪಾರಂಗತನ ಕಪಿಮುಷ್ಟಿಗೆ ಸಿಕ್ಕಿ ಪೆನ್ ಡ್ರೈವ್ ಹಂಚಿಕೊಂಡು ವಿಕೃತಾನಂದ ಅನುಭವಿಸುತ್ತಿರುವ ಅಶ್ಲೀಲ ವಿಡಿಯೋ ಬಿಸ್ನೆಸ್ ಪಾರ್ಟಿ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಇಂದು ಮತ್ತೊಂದು ಎಕ್ಸ್ ಪೋಸ್ಟ್ ಮಾಡಿದ್ದು,…

Read More

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ: ಮುಂದಿನ 5 ದಿನಗಳಲ್ಲಿ ಗುಡುಗು ಮಿಂಚು ಸಹಿತ ಬಿರುಗಾಳಿಯ ಮಳೆಯಾಗಲಿದೆ, ಹವಾಮಾನ ಇಲಾಖೆ ಎಚ್ಚರಿಕೆ..!

ಬೆಂಗಳೂರು : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವೇಳುವ ಸಾಧ್ಯತೆ ಇದ್ದು ಮೇ 26ರ ಮಧ್ಯಾಹ್ನದೊಳಗೆ ಅದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ಪ್ರಕೋಪ ನಿರ್ವಹಣಾ ಕೇಂದ್ರ (ಕೆಎಸ್ಎನ್ ಡಿಎಂಸಿ) ಹೇಳಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕೆಎಸ್ಎನ್ ಡಿಎಂಸಿ, “ಕರ್ನಾಟಕ, ಗೋವಾ, ಕರಾವಳಿಯ ಸಮೀಪದಲ್ಲಿ ಚಂಡಮಾರುತ ಚಲಾವಣೆಯಾಗುವ ಸಾಧ್ಯತೆಯಿದ್ದು ಮುಂದಿನ 48 ಗಂಟೆಗಳಲ್ಲಿ ಗೋವಾ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ’’ ಎಂದು ತಿಳಿಸಿದೆ. ಚಂಡಮಾರುತದ…

Read More

ಉಡುಪಿ: ಪೊಲೀಸರೇ ಗೂಂಡಾ ರೀತಿ ವರ್ತಿಸಿದರೆ ವ್ಯವಸ್ಥೆಗೆ ಮಾರಕ-ಮಾಜಿ ಸಚಿವ ಸುನಿಲ್ ಕುಮಾರ್

ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ವಿ. ಸುನಿಲ್ ಕುಮಾರ್, ಪೊಲೀಸರೇ ಗೂಂಡಾ ರೀತಿ ವರ್ತನೆ ಮಾಡಿದರೆ ಅದು ವ್ಯವಸ್ಥೆಗೆ ಮಾರಕ. ರಾಜ್ಯ ಸರ್ಕಾರದ ಈ ಕ್ರಮ ಸರಿಯಲ್ಲ. ಜನರಿಗೆ ರಕ್ಷಣೆ ಕೊಡುವುದು, ವಿಶ್ವಾಸ ನಿರ್ಮಾಣ ಮಾಡುವುದು ಪೊಲೀಸರ ಜವಾಬ್ದಾರಿ ಎಂದು ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ಬೆಳ್ತಂಗಡಿಯಲ್ಲಿ ಕಾನೂನು ಉಲ್ಲಂಘಿಸುವಂತಹ ಯಾವುದೇ ಘಟನೆ ನಡೆದಿರಲಿಲ್ಲ. ವಿನಾಕಾರಣ ರಾಜಕೀಯ ದ್ವೇಷದಿಂದ ಬಂಧನಕ್ಕೆ ಮುಂದಾಗಿದ್ದಾರೆ. ಈ ವಿಚಾರವನ್ನು ತಾರ್ಕಿಕ…

Read More

ಈ ದಾಖಲೆ ಇದ್ರೆ ಸಾಕು ನಿಮಗೆ ಸಿಗಲಿದೆ ʻಆಯುಷ್ಮಾನ್‌ ಕಾರ್ಡ್‌ʼ : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಸರ್ಕಾರದ ಕೆಲವು ಯೋಜನೆಗಳ ಅಡಿಯಲ್ಲಿ ಜನರಿಗೆ ಆರ್ಥಿಕ ಸಹಾಯವನ್ನು ನೀಡಲಾಗುತ್ತಿದೆ. ಈ ಯೋಜನೆಗಳಿಗೆ ಸರಕಾರಗಳು ಸಾಕಷ್ಟು ಹಣ ವ್ಯಯಿಸುತ್ತಿವೆ. ಈ ಯೋಜನೆಗಳನ್ನು ಪ್ರತಿಯೊಬ್ಬ ನಿರ್ಗತಿಕರಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಗಳಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ-ಮುಖ್ಯಮಂತ್ರಿ ಯೋಜನೆಯೂ ಒಂದಾಗಿದೆ. ಇದರ ಅಡಿಯಲ್ಲಿ ಉಚಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗಿದೆ. ಈ ಪ್ರಯೋಜನವನ್ನು ಪಡೆಯಲು, ಜನರು ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬೇಕು, ಇದಕ್ಕಾಗಿ…

Read More

ಪ್ರಧಾನಿ ಮೋದಿಯನ್ನು ಕೊಲ್ಲುವುದಾಗಿ NIA ಕಚೇರಿಗೆ ಬೆದರಿಕೆ ಕರೆ: ಸೈಬರ್​ ಪೊಲೀಸರಿಂದ ತನಿಖೆ ಶುರು

ಚೆನ್ನೈ (ತಮಿಳುನಾಡು): ಚೆನ್ನೈನ ಪುರಸೈವಾಕಂನಲ್ಲಿರುವ ರಾಷ್ಟ್ರೀಯ ಗುಪ್ತಚರ ಸಂಸ್ಥೆ (ಎನ್‌ಐಎ) ಕಚೇರಿಯ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ವ್ಯಕ್ತಿಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕರೆ ಸ್ವೀಕರಿಸಿದ ನಂತರ, ರಾಷ್ಟ್ರೀಯ ಗುಪ್ತಚರ ಏಜೆನ್ಸಿಯ ಅಧಿಕಾರಿಗಳು ತ್ವರಿತವಾಗಿ ಚೆನ್ನೈ ಪೊಲೀಸರ ಅಧಿಕಾರಿಗಳಿಗೆ ಸೂಚನೆ ನೀಡಿದರು, ಬೆದರಿಕೆ ಹಾಕಿದ್ದ ಪೋನ್ ನಂಬರ್‌ ಅನ್ನು ನೀಡಿದ್ದಾರೆ ಈ ಬಗ್ಗೆ ಚೆನ್ನೈನ ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Read More

ಜಮ್ಮು & ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದು ಸರಿ: ಕೇಂದ್ರದ ನಿಲುವಿಗೆ ಸುಪ್ರೀಂ ಕೋರ್ಟ್‌ ಸಹಮತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಕೇಂದ್ರ ಸರ್ಕಾರವು ಆಗಸ್ಟ್ 2019ರಲ್ಲಿ ಆರ್ಟಿಕಲ್ 370 ಅನ್ನು ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಎತ್ತಿಹಿಡಿಯುವ ಡಿಸೆಂಬರ್ 2023ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಸಂಬಂಧ ತನ್ನ ಚೇಂಬರ್‌ನಲ್ಲಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಮರುಪರಿಶೀಲನಾ ಅರ್ಜಿಗಳನ್ನು…

Read More

NIT Karnataka Jobs: ಸ್ಟೂಡೆಂಟ್ ಇಂಟರ್ನ್​ಶಿಪ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

NIT Karnataka Recruitment 2024: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಟೂಡೆಂಟ್ ಇಂಟರ್ನ್​ಶಿಪ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 30, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಕೆಗೂ ಮುನ್ನ…

Read More

Bengaluru Jobs: ತಿಂಗಳಿಗೆ ₹ 50,000 ಸಂಬಳ- ಈ ಹುದ್ದೆಗೆ ಬೆಂಗಳೂರಿನಲ್ಲಿ ಸಂದರ್ಶನ

NIMHANS Recruitment 2024: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 31, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ…

Read More

ಇಂದು ಮಂಗಳೂರಿನ ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ‘ಪಂಚಮ ವಾರ್ಷಿಕ ಸಂಭ್ರಮ’

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಮಂಗಳೂರು ನಗರ ಘಟಕದ ‘ಪಂಚಮ ವಾರ್ಷಿಕ ಸಂಭ್ರಮ’ವು ಇಂದು (ದಿನಾಂಕ 23-05-2024) ರಂದು ಸಂಜೆ ಗಂಟೆ 3-00ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 3-00ರಿಂದ ‘ಯಕ್ಷ ಹಾಸ್ಯ ವೈಭವ’ದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ, ಮದ್ದಳೆ – ಶ್ರೀ ಗುರುಪ್ರಸಾದ್ ಬೊಳಿಂಜಡ್ಕ, ಚಂಡೆ – ಶ್ರೀ ಪ್ರಶಾಂತ್ ವಗೆನಾಡು, ಚಕ್ರತಾಳ – ಪೂರ್ಣೇಶ್ ಆಚಾರ್ಯ ಮತ್ತು ಮುಮ್ಮೇಳದಲ್ಲಿ ದಿನೇಶ್ ಶೆಟ್ಟಿಗಾರ್ ಕೋಡಪದವು, ದಿನೇಶ್ ರೈ…

Read More