ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು- ಬ್ರಿಜೇಶ್ ಚೌಟ
ಮಂಗಳೂರು: ನವಯುಗ ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸಿ, ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹೇಳಿದರು. ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಂತೆ ಸುರತ್ಕಲ್ ನ ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ…

