ಉಳ್ಳಾಲ: ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಲ್ಲೆ ..!
ಉಳ್ಳಾಲ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟದ ಬಳಿಕ ಮಂಗಳವಾರ ಸಂಜೆ ಕುಂಪಲದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಲೆಗೆತ್ನಿಸಿದ ಘಟನೆ ಕುಂಪಲ ಬಾರ್ದೆ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸದ್ಯ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕುಂಪಲ ಮೂರುಕಟ್ಟ, ಪಲ್ಲ ನಿವಾಸಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ(35) ಹಲ್ಲೆಗೊಳಗಾದ ಯುವಕ. ಬಿಜೆಪಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ ಮತ್ತು ಸ್ನೇಹಿತರು ಮಂಗಳವಾರ ಸಂಜೆ…

