ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ:ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಆಕ್ರೋಶ
ಮಂಗಳೂರು: ‘ವಿಧಾನ ಪರಿಷತ್ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಪ್ರಾದೇಶಿಕ ನ್ಯಾಯ ಮರೆತಿದೆ. ಬಿಜೆಪಿಗೂ ಕಾಂಗ್ರೆಸ್ ಮಾದರಿಯ ಗಾಡ್ ಫಾದರ್ ಸಂಸ್ಕೃತಿ ಅಂಟಿಕೊಂಡಿದ್ದು,ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ನೈರುತ್ಯ ಪಧವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಕಿಡಿಕಾರಿದ್ದಾರೆ.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರಾವಳಿಯ ಜನರು ತಾವು ಹೇಳಿದ್ದೆಲ್ಲವನ್ನೂ ಕೇಳಿ ಸುಮ್ಮನಿರುತ್ತಾರೆ ಎಂಬ ಭಾವನೆ ಬಿಜೆಪಿ ನಾಯಕರಲ್ಲಿದೆ. ಅನ್ಯಾಯವಾದರೆ ಕರಾವಳಿಯ ಜನರೂ ಪ್ರತಿಭಟಿಸುತ್ತಾರೆ ಎಂಬುದನ್ನು ತೋರಿಸಿಕೊಡಲು ಚುನಾವಣೆಗೆ ನಿಂತಿದ್ದೇನೆ ಎಂದು ಪಕ್ಷದ ವರಿಷ್ಠರಿಗೆ…

