ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚನೆ: ಮಹಿಳೆ ಬಂಧನ

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಬ್ಸಿಡಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮೋಸಕ್ಕೆ ಬಲಿಯಾದವರು ಉಡುಪಿ ನಗರ ಮತ್ತು ಬ್ರಹ್ಮಾವರ ಠಾಣೆಗಳಲ್ಲಿ ದೂರು ದಾಖಲಿಸಿದ್ದು , ವಂಚನೆ ಜಾಲ ಬೆನ್ನತ್ತಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚನೆ ಜಾಲದ ಕಿಂಗ್ ಪಿನ್ ಬ್ರಹ್ಮಾವರ ತಾಲ್ಲೂಕು ಆರೂರು ಗ್ರಾಮ ಕೌಸಲ್ಯಾ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ವಂಚನೆ ಜಾಲದ ಕೊಕ್ಕರ್ಣೆ…

Read More

1650 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭ

ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 1650 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಪೊಲೀಸ್‌ ಇಲಾಖೆಯ ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಉಳಿದಿರುವ 1,650 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಮೀಸಲಾತಿ ಅನ್ವಯ ಹುದ್ದೆಗಳನ್ನು ಮರು ಹಂಚಿಕೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕಲ್ಯಾಣ ಕರ್ನಾಟಕದ 179, ಸಾಮಾನ್ಯ ವೃಂದದ ಜಿಲ್ಲೆಗಳಿಗೆ…

Read More

ಇನ್ಮುಂದೆ ‘KSRTC ಬಸ್ಸು’ಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದು ನಿಷೇಧ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತ್ರ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿದ್ದರು. ಈ ದುರಂತದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂತ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯೋದಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಸುರಕ್ಷತೆಯ ದೃಷ್ಠಿಯಿಂದ ಪ್ರಯಾಣಿಕರ ಪ್ರತಿ ಬ್ಯಾಗ್ ಚೆಕ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ…

Read More

ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು: ಹೋಂ ಸ್ಟೇ ಸ್ನಾದ ಗೃಹದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಹಿಪ್ಲ ಹೋಮ್ ಸ್ಟೇಯಲ್ಲಿ ನಡೆದಿದೆ.   ದೇವಲಾಪುರ ಗ್ರಾಮದ ರಂಜಿತಾ (27) ಮೃತ ಯುವತಿ. ರಂಜಿತಾ ಹಾಗೂ ರೇಖಾ ಎಂಬ ಯುವತಿಯರು ಸ್ನೇಹಿತೆಯ ಎಂಗೇಜ್ ಮೆಂಟ್ ಗೆಂದು ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಬಂದಿದ್ದರು. ಮೃತ ರಂಜಿತಾ ಚಿಕ್ಕಮಗಳೂರಿನ ದೇವಲಾಪುರ ಮೂಲದವರು. ರಂಜಿತಾ ಹಾಗೂ ರೇಖಾ ಬೆಂಗಳೂರುನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರು.   ಎರಡು…

Read More

ಧರ್ಮಸ್ಥಳ ಪ್ರಕರಣ: ತಿಮರೋಡಿ ಸಹಿತ ನಾಲ್ಕು ಮಂದಿಗೆ ನೋಟೀಸ್

ಧರ್ಮಸ್ಥಳದಲ್ಲಿ ಸರಣಿ ಶವ ಹೂತಿರುವ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ತಂಡವು ಮಹೇಶ್ ಶೆಟ್ಟಿ ತಿಮರೋಡಿ ಸಹಿತ ನಾಲ್ಕು ಮಂದಿಗೆ ನೋಟೀಸ್ ನೀಡಿದೆ.  ಅ. 27ರಂದು ವಿಚಾರಣೆಗೆ ಹಾಜರಾಗುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಹಾಗೂ ಸೌಜನ್ಯ ಮಾವ ವಿಠಲ ಗೌಡ ಎಂಬವರಿಗೆ ನೋಟೀಸ್ ಜಾರಿ ಮಾಡಿದೆ. ಈ ನಡುವೆ ಅ. 25ರಂದು ಎಸ್‌ಐಟಿ ಮುಖ್ಯಸ್ಥಪ್ರಣಬ್ ಮೊಹಾಂತಿ ಅವರು ಬೆಳ್ತಂಗಡಿ ಕಚೇರಿಗೆ ಆಗಮಿಸಿ, ತನಿಖೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. 

Read More

ಮಂಗಳೂರು ವಿಮಾನ ನಿಲ್ದಾಣ: ಚಳಿಗಾಲದ ಹೊಸ ವೇಳಾಪಟ್ಟಿ ಪ್ರಕಟ; ಅ.26 ರಿಂದಲೇ ಜಾರಿ…

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಕ್ಟೋಬರ್ 26ರಿಂದ ಜಾರಿಗೆ ಬರುವ ಚಳಿಗಾಲದ ಹೊಸ ವಿಮಾನಯಾನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದ್ದು, ದೆಹಲಿಗೆ ಎರಡನೇ ದೈನಂದಿನ ವಿಮಾನ, ತಿರುವನಂತಪುರಂಗೆ ಹೊಸ ಸೇವೆ ಮತ್ತು ಗಲ್ಫ್ ರಾಷ್ಟ್ರಗಳಿಗೆ ಹೆಚ್ಚುವರಿ ವಿಮಾನ ಸಂಪರ್ಕವನ್ನು ಕಲ್ಪಿಸಲಾಗಿದೆ. ಈ ಪರಿಷ್ಕೃತ ವೇಳಾಪಟ್ಟಿಯು 2026ರ ಮಾರ್ಚ್ 28ರವರೆಗೆ ಜಾರಿಯಲ್ಲಿರುತ್ತದೆ. ದೇಶೀಯ ವಿಮಾನಯಾನದಲ್ಲಿ ಪ್ರಮುಖ ಬದಲಾವಣೆಗಳು: 1. ದೆಹಲಿಗೆ ಹೆಚ್ಚುವರಿ ವಿಮಾನ:ಈಗಾಗಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು-ದೆಹಲಿ…

Read More

ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧಿಸಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಯತ್ನಾಳ್ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧಿಸಿ. ಹಲಾಲ್ ಸರ್ಟಿಫಿಕೇಷನ್ ಏಜೆನ್ಸಿಗಳನ್ನು ನಿಷೇಧಿಸಿ. ಹಲಾಲ್ ಸರ್ಟಿಫಿಕೇಟ್ ಹಣ ದುರ್ಬಳಕೆ ಆಗುತ್ತಿದೆ. ದೇಶದ ಭದ್ರತೆ ದೃಷ್ಟಿಯಿಂದ ಹಲಾಲ್ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಂದ ಕೆಲ ಸಂಘಟನೆಗಳು ಹಣ ದುರ್ಬಳಕೆ…

Read More

ಸ್ನಾನ ಗೃಹದಲ್ಲಿ ಗ್ಯಾಸ್‌ ಗೀಸರ್‌ ಸೋರಿಕೆ: ಅಕ್ಕ-ತಂಗಿಯರಿಬ್ಬರೂ ಉಸಿರುಗಟ್ಟಿ ಸಾವು

 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಮನೆಯ ಸ್ನಾನಗೃಹದಲ್ಲಿದ್ದ ಗ್ಯಾಸ್‌ ಗೀಸರ್‌ನಿಂದ ಕಾರ್ಬನ್ ಮಾನಾಡ್ ಸೋರಿಕೆಯಾದ ಪರಿಣಾಮ, ಅಕ್ಕ-ತಂಗಿಯರಿಬ್ಬರೂ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬೆಟ್ಟದಪುರ ಗ್ರಾಮದ ಸಿಮ್ರಾನ್ ತಾಜ್(23)ಮತ್ತು ಅವರ ಸಹೋದರಿ ಗುಲ್ಬರ್ಮ್ ತಾಜ್ (20) ದುರಂತ ಅಂತ್ಯ ಕಂಡ ಯುವತಿಯರು. ಸಹೋದರಿಯರಾದ ಸಿಮ್ರಾನ್ ತಾಜ್ ಮತ್ತು ಗುಲ್ಬರ್ಮ್ ತಾಜ್ ಒಟ್ಟಿಗೆ ಸ್ನಾನ ಮಾಡಲು ಬಾತ್‌ರೂಂಗೆ ತೆರಳಿದ್ದರು. ಈ ವೇಳೆ ಸ್ನಾನದ ಕೋಣೆಯಲ್ಲಿ ಅಳವಡಿಸಿದ್ದ ಗ್ಯಾಸ್ ಗೀಸರ್‌ನಿಂದ ಮಾರಕವಾದ ಕಾರ್ಬನ್ ಮಾನಾಡ್ ವಿಷಾನಿಲ ಸೋರಿಕೆಯಾಗಿದೆ. ಸ್ನಾನದ ಕೋಣೆಯಲ್ಲಿ…

Read More

ಶಬರಿಮಲೆ ದೇಗುಲದಲ್ಲಿ ಚಿನ್ನ ಕಳವು ಪ್ರಕರಣ : ಆರೋಪಿ ಪೊನ್ನಿ ಉನ್ನಿಕೃಷ್ಣನ್ ಮನೆ ಮೇಲೆ SIT ರೇಡ್

ಶಬರಿಮಲೆ ದೇಗುಲದಲ್ಲಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಪೊನ್ನಿ ಉನ್ನಿಕೃಷ್ಣನ್ ಮನೆಯ ಮೇಲೆ ಕೇರಳ ಎಸ್ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಮೇಲೆ ದಾಳಿ ಮಾಡಿದ್ದಾರೆ. ನಾಲ್ವರು ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ತಿರುವನಂತಪುರದಲ್ಲಿ ಉನ್ನಿಕೃಷ್ಣನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ತನಿಖೆ ಭಾಗವಾಗಿ ಸಾಕ್ಷಿ ಆಧಾರಗಳನ್ನು ಸಂಗ್ರಹಿಸಲು ಪ್ರಮುಖ ಆರೋಪಿಯಾಗಿರುವ ಪೊನ್ನಿ ಉನ್ನಿಕೃಷ್ಣನ್ ನಿವಾಸದ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ….

Read More

ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ!!

ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್‌ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು  ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಬಹುದು.

Read More