Headlines

ಇಂದಿನಿಂದ GST ಸ್ಲ್ಯಾಬ್‌ ಜಾರಿ: ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?

ಇಂದಿನಿಂದ GST ಸ್ಲ್ಯಾಬ್‌ ಜಾರಿ, ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿಯಾಗಲಿದೆ ಎಂಬ ಮಾಹಿತಿ ಇಲ್ಲಿದೆ. ಔಷಧಿಗಳು, ಆಟೋಮೊಬೈಲ್‌ ಮತ್ತು ಉಪಕರಣಗಳು ಸೇರಿದಂತೆ ಸುಮಾರು 375 ವಸ್ತುಗಳ ಮೇಲೆ ಹೊಸ ಜಿಎಸ್‌ಟಿ ದರ ಇಂದಿನಿಂದ (ಸೆ. 22) ಜಾರಿಗೆ ಬರಲಿದೆ. ಈ ಹಿನ್ನೆಲೆ ಅಡುಗೆ ಸಾಮಗ್ರಿಗಳ ಬೆಲೆಗಳು ಸೋಮವಾರದಿಂದ ಅಗ್ಗವಾಗಲಿವೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ನವರಾತ್ರಿಯ ಮೊದಲ ದಿನವಾದ ಸೆಪ್ಟಂಬರ್ 22 ರಿಂದ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ…

Read More

ವಿದ್ಯಾರ್ಥಿಗಳೇ ಗಮನಿಸಿ : SSLC, ದ್ವಿತೀಯ PUC ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ 

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ…

Read More

ಮಂಗಳೂರು: ಶ್ರೀ ದೇವಿ ದೇವಸ್ಥಾನದಲ್ಲಿ ಅ.22ರಿಂದ ಮಹಾನವಮಿ ಉತ್ಸವ ಮತ್ತು ಚಂಡಿಕಾ ಹೋಮ

ಮಂಗಳೂರು: ಶ್ರೀ ದೇವಿ ದೇವಸ್ಥಾನ ಪೊಲೀಸ್ ಲೇನ್ ಮಂಗಳೂರು ಇಲ್ಲಿ ದಸರಾ ಪ್ರಯುಕ್ತ ಮಹಾನವಮಿ ಉತ್ಸವ ಮತ್ತು ಚಂಡಿಕಾ ಹೋಮ ಅ.22ರಿಂದ ನ.1 ರ ವರೆಗೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಮಾಜ ಭಾಂದವರು ಮತ್ತು ಸಾರ್ವಜನಿಕ ರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದೇವಿ ದೇವಸ್ಥಾನದ ಆಡಳಿತದಾರರಾದ ದ.ಕ ಜಿಲ್ಲಾ ಕುಂಬಾರ ಯಾನೆ ಮೂಲ್ಯರ ಮಾತೃ ಸಂಘ (ರಿ.) ಪ್ರಕಟನೆಯಲ್ಲಿ ತಿಳಿಸಿದೆ.

Read More

ಕುಲಾಲ ವೇದಿಕೆ ಹೊಸಬೆಟ್ಟು ಮಂಜೇಶ್ವರ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಕುಲಾಲ ವೇದಿಕೆ ಹೊಸಬೆಟ್ಟು ಮಂಜೇಶ್ವರ ಇದರ ನೂತನ ಅಧ್ಯಕ್ಷರಾಗಿ ಶ್ರೀಯುತ ರಾಮಚಂದ್ರ ಮಾಸ್ತರ್ ಮಿಯಪದವು ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿಶಾನ್ ಕಣ್ವತೀರ್ಥ ಕೋಶಧಿಕಾರಿ ಶ್ರೀಯುತ ಶಿವಾನಂದ ಹೊಸಬೆಟ್ಟು ಆಯ್ಕೆಯಾದರು.

Read More

ಉಡುಪಿ: ಸಮುದ್ರದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳು ನೀರುಪಾಲು..! ಓರ್ವ ಮೃತ್ಯು, 5 ಮಂದಿಯ ರಕ್ಷಣೆ

ಉಡುಪಿ: ಕಟಪಾಡಿಯ ಮಟ್ಟು ಬೀಚ್ ಬಳಿ ಸಮುದ್ರದಲ್ಲಿ ಆಟವಾಡುತ್ತ ಈಜಾಡುತ್ತಿದ್ದ 6 ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ವಿದ್ಯಾರ್ಥಿ ಸಾವಿಗೀಡಾದ ಘಟನೆ ಇಂದು (ಶನಿವಾರ) ಮಧ್ಯಾಹ್ನ ಸಂಭವಿಸಿದೆ. ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಮೃತಪಟ್ಟ ವಿದ್ಯಾರ್ಥಿ. ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ಸ್ಥಳೀಯರು ಈ ವಿದ್ಯಾರ್ಥಿಗಳ ತಂಡವನ್ನು ಎಚ್ಚರಿಸಿದ್ದರೂ ಕೂಡ ನಿರ್ಲಕ್ಷಿಸಿ ಪ್ರಾಣಕ್ಕೆ ಕುತ್ತು ತಂದರೆನ್ನಲಾಗಿದೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯ ನಡೆಸಿದ್ದರು. ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕ್ರಿಶ್ಚಿಯನ್​ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ತೆಗೆದು ಹಾಕಲಾಗಿದೆ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಜಾತಿ ಗಣತಿ ಆರಂಭವಗಲಿದ್ದು, ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್​ ಅಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಕ್ರಿಕ್ರಿಶ್ಚಿಯನ್​ ಅಡಿ ವಿವಿಧ ಜಾತಿಗಳನ್ನು ನಮೂದಿಸಿದನ್ನು ಆಯೋಗ ಈಗಾಗಲೇ ತೆಗೆದು ಹಾಕಿದೆ ಎಂದು ಸ್ಪಷ್ಟಪಡಿಸಿದರು. ಗದಗದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆಯು ಕೇವಲ ಜಾತಿ ಗಣತಿಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ…

Read More

ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thaawarchand Gehlot) ಮಧ್ಯ ಪ್ರವೇಶಿಸಿದ್ದು ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ (Siddaramaia) ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ (Caste Census) ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ…

Read More

ಚಿನ್ನದಂಗಡಿ ಕಳವು ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ-ಚಿನ್ನಾಭರಣ ಜಪ್ತಿ

ಉಡುಪಿ ನಗರದ ಚಿತ್ತರಂಜನ್ ವೃತ್ತದಲ್ಲಿ ಚಿನ್ನ ಕರಗಿಸುವ ಅಂಗಡಿಯಲ್ಲಿ 95 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಕಳವು ಮಾಡಿದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸೋಲಾಪುರದ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ, ನಿಲೇಶ ಬಾಪು ಕಸ್ತೂರಿ, ಸಾಗರ ದತ್ತಾತ್ರೇಯ ಕಂಡಗಾಲೆ(32), ಬಾಗವ ರೋಹಿತ್ ಶ್ರೀಮಂತ್(25)ಬಂಧಿತರು. ಆರೋಪಿಗಳನ್ನು ಸೆ. 12 ರಂದು ಮಹಾರಾಷ್ಟ್ರ ಸೋಲಾಪುರ ಜಿಲ್ಲೆ ಮಲ್‌ಶಿರೋಸ್ ತಾಲೂಕು, ನಿಮ್‌ಗಾಂವ್‌ ಎಂಬಲ್ಲಿ ವಶಕ್ಕೆ ಪಡೆದು ಆರೋಪಿಗಳಿಂದ…

Read More

ನಾಳೆ ಭಾಗಶಃ ಸೂರ್ಯಗ್ರಹಣ: ಈ ನಗರಗಳು 2025 ರ ಕೊನೆಯ ಗ್ರಹಣಕ್ಕೆ ಸಾಕ್ಷಿಯಾಗಲಿವೆ

ಸಂಪೂರ್ಣ ಚಂದ್ರಗ್ರಹಣದ ಸಮಯದಲ್ಲಿ ಚಂದ್ರನು ರಕ್ತ-ಕೆಂಪು ಬಣ್ಣಕ್ಕೆ ತಿರುಗಿದ ನಂತರ, ನಕ್ಷತ್ರವೀಕ್ಷಕರು ಮುಂದಿನ ಆಕಾಶ ಘಟನೆಯಾದ ಭಾಗಶಃ ಸೂರ್ಯಗ್ರಹಣಕ್ಕೆ ಸಿದ್ಧರಾಗಿದ್ದಾರೆ. ಇದು ವರ್ಷದ ಕೊನೆಯ ಸೂರ್ಯಗ್ರಹಣವಾಗಿದ್ದು, ವಿಶ್ವದ ಹಲವಾರು ಭಾಗಗಳಲ್ಲಿ ಗೋಚರಿಸುವ ಅದ್ಭುತ ಆಕಾಶ ಘಟನೆಯನ್ನು ನೀಡುತ್ತದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯಗ್ರಹಣವು ಭಾಗಶಃ ಅಥವಾ ಸಂಪೂರ್ಣವಾಗಿ ಸೂರ್ಯನನ್ನು ಮಸುಕಾಗಿಸುತ್ತದೆ. ಭಾಗಶಃ ಸೂರ್ಯಗ್ರಹಣದಲ್ಲಿ, ಸೂರ್ಯನ ಒಂದು ಭಾಗವು ಮಾತ್ರ ಚಂದ್ರನಿಂದ ಆವೃತವಾಗಿರುತ್ತದೆ, ಅದರ ಪ್ರಕಾಶಮಾನವಾದ ಡಿಸ್ಕ್ ನಿಂದ “ಕಚ್ಚುವಿಕೆ” ಅನ್ನು ಸೃಷ್ಟಿಸುತ್ತದೆ. ಇದು…

Read More

ಉಡುಪಿ: ನಾಪತ್ತೆಯಾದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ..!!

ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ‌ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್‌ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ‌ ಕನ್ನಡಕುದ್ರು ನದಿ…

Read More