Headlines

ಮಂಗಳೂರು: ಇಂಜಿನ್ ಬಂದ್ ಆಗಿ ಮೀನುಗಾರಿಕಾ ಬೋಟ್ ಪಲ್ಟಿ..!! ಅಪಾರ ನಷ್ಟ

ಮಂಗಳೂರು: ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕಾ ಬೋಟ್ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗೆ ಬಡಿದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲ ಸೀಗ್ರೌಂಡ್‌ನಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ 13 ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.  ಅಶ್ಫಾಕ್ ಎಂಬವರ ಮಾಲಕತ್ವದ ಬುರಾಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಈ ಸಂದರ್ಭ ಚಾಲಕ ಸಹಿತ ಬೋಟ್‌ನಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿ ದಡ ಸೇರಿದ್ದಾರೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನು ಹೇರಿಕೊಂಡು…

Read More

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ, ಪ್ರತಾಪ್‌ ಸಿಂಹ ಸಲ್ಲಿಸಿದ್ದ PIL ವಜಾ

ಬೆಂಗಳೂರು:ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನವನ್ನು ಪ್ರಶ್ನಿಸಿದ್ದ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಇದರೊಂದಿಗೆ ಮೂವರು ಕೂಡ ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿಯಲ್ಲಿ ಉಲ್ಲೇಖ ಮಾಡಿರುವಂತೆ ಯಾವುದೇ ಸಾರ್ವಜನಿಕವಾಗಿ ಹಕ್ಕು ಉಲ್ಲೇಖವಾಗಿಲ್ಲ ಅಂತ ತಿಳಿಸಿದೆ. ಇದರೊಂದಿಗೆ ಪ್ರತಾಪ್‌ ಸಿಂಹ ಸಲ್ಲಿಸಿದ್ದ ವಜಾ ಮಾಡಿದೆ. ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು.,…

Read More

ವಕ್ಫ್ ತಿದ್ದುಪಡಿ ಕಾಯ್ದೆ ಪ್ರಶ್ನಿಸಿದ ಅರ್ಜಿಗಳ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ನೀಡಲಿದೆ. ಮೇ ತಿಂಗಳಲ್ಲಿ ವಿಚಾರಣೆಗೆ ಬರಬೇಕಿದ್ದ ಅರ್ಜಿಗಳ ಕುರಿತು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ತೀರ್ಪು ನೀಡಲಿದೆ. ಬಳಕೆ ಅಥವಾ ನೋಂದಣಿ ಮೂಲಕ ವಕ್ಫ್ ಆಗಿರುವ ಭೂಮಿಯಲ್ಲಿ ಯಥಾಸ್ಥಿತಿ ಮುಂದುವರಿಯುತ್ತದೆಯೇ ಎಂಬ ನಿರ್ಣಾಯಕ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಇಂದು ಉತ್ತರಿಸಲಿದೆ. ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ವಕ್ಫ್ ಕೌನ್ಸಿಲ್ ಮತ್ತು ಮಂಡಳಿಗಳಿಗೆ ಹೊಸ ನೇಮಕಾತಿಗಳನ್ನು…

Read More

ರಾಜ್ಯಾದ್ಯಂತ 7.76 ಲಕ್ಷ `BPL ರೇಷನ್ ಕಾರ್ಡ್’ ರದ್ದು.!

ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 7.76 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 7.76 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಆಹಾರ ಇಲಾಖೆಯ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ…

Read More

ಗೆಳೆಯರಿಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ..!!

ಬೈಂದೂರು: ಮದ್ಯವ್ಯಸನಿಗಳಾದ ಗೆಳೆಯರಿಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕೇರಳ ಮೂಲದ ಬಿನೋ ಫಿಲಿಪ್ (45) ಕೊಲೆಯಾದ ಕಾರ್ಮಿಕ. ಉದಯ್ ಕೊಲೆ ಆರೋಪಿ. ತೂದಳ್ಳಿ ದೇವರಗದ್ದೆ ನಿವಾಸಿ ಥೋಮಸ್ ಎನ್ನುವವರ ತೋಟದಲ್ಲಿ ಕೇರಳ ಮೂಲದ ಬಿನೋ ಫಿಲಿಪ್ ಹಾಗೂ ಉದಯ್ ಕಳೆದ ಎರಡು ವರ್ಷಗಳಿಂದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಮದ್ಯಪಾನ ಮಾಡಿದಾಗ ಆಗ್ಗಾಗೆ ಗಲಾಟೆ ಮಾಡಿಕೊಳ್ಳುತ್ತಿದ್ದರೆನ್ನಲಾಗಿದೆ. ಶನಿವಾರ ತಡರಾತ್ರಿಯೂ ಇಬ್ಬರ ನಡುವೆ…

Read More

ಉಡುಪಿ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು-ಸಹ ಸವಾರ ಗಂಭೀರ

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಹಾರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ. ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ನಿವಾಸಿ ಶ್ರೇಯಸ್  (22) ಮೃತಪಟ್ಟ ಯುವಕ. ಘಟನೆಯಲ್ಲಿ  ಸಹಸವಾರ ಗಾಯಗೊಂಡ ಘಟನೆ ಪಡುವಾಲೂರರು ನಿವಾಸಿ ವಿಘ್ನೇಶ  (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು,…

Read More

ಸೈಬರ್ ವಂಚನೆ ಕಡಿವಾಣಕ್ಕೆ ದಿಟ್ಟ ಕ್ರಮ: ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ರಾಜ್ಯದಲ್ಲಿ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. 16,000ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ಬಾಕಿ ಇವೆ. ಹೀಗಾಗಿ ಸೈಬರ್ ಅಪರಾಧ ತಡೆಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಸೈಬರ್ ವೈಚನೆ ಕಡಿವಾಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ. ಈ ಸೈಬರ್ ಕಮಾಂಡ್ ಸೆಂಟರ್ ನಲ್ಲಿ ನಾಲ್ಕು ವಿಂಗ್ ಗಳನ್ನು…

Read More

ಡಯಾಲಿಸಿಸ್ ರೋಗಿಗಳಿಗೆ ಇನ್ಮುಂದೆ ಮನೆಯಲ್ಲೇ ಚಿಕಿತ್ಸೆ!

ಕರ್ನಾಟಕದಲ್ಲಿ  ಪರಿಟೋನೀಯಲ್ ಡಯಾಲಿಸಿಸ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮೋದನೆಯನ್ನು ನೀಡಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಡಯಾಲಿಸಿಸ್‌ ರೋಗಿಗಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತ ಸಂಖ್ಯೆ: HFWS -DLSOFILE/20/2025 (1780906) ಕರ್ನಾಟಕದಲ್ಲಿ ಮೂತ್ರಪಿಂಡದ ಕಾಯಿಲೆ ಹಾಗೂ ಎಂಡ್-ಸೈಜ್ ರಿನಲ್ ಕಾಯಿಲೆ (ESRD) ಗಳು ಹೆಚ್ಚಾಗುತ್ತಿದ್ದು, ಇದರಿಂದ ಆರೋಗ್ಯ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಎದುರಾಗುತ್ತಿದೆ. ಮೂತ್ರಪಿಂಡ ಕಾಯಿಲೆಗೆ ជ Renal Replacement…

Read More

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ವಂಚನೆ ಪ್ರಕರಣ- ಮತ್ತೆ ನಾಲ್ಕು ಮಂದಿ ಆರೋಪಿಗಳ ಬಂಧನ

ಮಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದ ಜಾಲವನ್ನು ಬಯಲಿಗೆಳೆದಿರುವ ಮಂಗಳೂರಿನ ಸಿಸಿಬಿ ಪೊಲೀಸರು ಮತ್ತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ತೊಕ್ಕೊಟ್ಟು ಅಂಬಿಕಾ ರಸ್ತೆ ನಿವಾಸಿ ನಿಶಾಂತ್ ಕುಮಾರ್ (28), ಬಂಟ್ವಾಳ ತಾಲೂಕು ಪುದು ಸುಜೀರ್ ರಸ್ತೆ ನಿವಾಸಿ ನಿತಿನ್ ಕುಮಾರ್ (31), ಇಂದಿರಾನಗರ ಹಾಲಾಡಿ ಸಜಿಪ ಮುನ್ನೂರು ನಿವಾಸಿ ಹಸನ್ ರಿಯಾಝ್ (46) ಮತ್ತು ಕಾವೂರು ಪಳನೀರ್ ನಿವಾಸಿ ಹನೀಫ್ (39) ಬಂಧಿತ ಆರೋಪಿಗಳಾಗಿದ್ದಾರೆ. ಆಧಾರ್ ಕಾರ್ಡ್ ಮತ್ತು ಪಹಣಿ ಪತ್ರಗಳನ್ನು ನಕಲಿಯಾಗಿ…

Read More

ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ ಶಿಕ್ಷೆ..! ಕೋರ್ಟ್ ತೀರ್ಪು

ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದೆ. ದಿನಾಂಕ 06-08-2024 ರಂದು ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ತನ್ನ ಚಿಕ್ಕಪ್ಪನೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ…

Read More