ಬೆಳ್ತಂಗಡಿ: ಮಾದಕ ವಸ್ತು ಸೇವೆನೆ..!! ಇಬ್ಬರು ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವಿಸುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ. ಆರೋಪಿಗಳಾದ ಬಾರ್ಯ ಗ್ರಾಮದ ಸೂರ್ಯ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು ಇಳಂತಿಲ ಗ್ರಾಮದ ರಿಫಾಯಿ ನಗರ ಮನೆ ನಿವಾಸಿ ಮಹಮ್ಮದ್ ಜಿಯಾದ್ (23) ಬಂಧಿತರು. ಇವರಿಬ್ಬರು ಉಪ್ಪಿನಂಗಡಿಯ ಹಿರೆಬಂಡಾಡಿ ಕ್ರಾಸ್ ರಸ್ತೆಯ ಬಳಿ ಶಾಲೆಯ ಹತ್ತಿರ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ದೊರೆತ ಮಾಹಿತಿಯಾಧಾರದಲ್ಲಿ ಗಸ್ತು ನಿರತ ಎಸೈ ಅವಿನಾಶ್ ಅವರ ತಂಡವು ಆರೋಪಿಗಳನ್ನು…

