Headlines

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಈ ತಪ್ಪು ಮಾಡಿದ್ರೆ ರೇಷನ್ ಕಾರ್ಡ್ ರದ್ದು, ಸರ್ಕಾರಿ ಸೌಲಭ್ಯಗಳೂ ಬಂದ್.!

ಪಡಿತರ ಚೀಟಿ ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ನಿರ್ಣಾಯಕ ದಾಖಲೆಯಾಗಿ ಉಳಿದಿದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಗೋಧಿ ಮತ್ತು ಅಕ್ಕಿಯಂತಹ ಸಬ್ಸಿಡಿ ಧಾನ್ಯಗಳನ್ನು ಪಡೆಯಲು ಅವಕಾಶವನ್ನು ಖಚಿತಪಡಿಸುವುದಲ್ಲದೆ, ಫಲಾನುಭವಿಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, 2025 ರಲ್ಲಿ, ಒಂದು ಸಣ್ಣ ತಪ್ಪು ಅಥವಾ ನಿರ್ಲಕ್ಷ್ಯವು ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಅಗತ್ಯ ಸರ್ಕಾರಿ ಸವಲತ್ತುಗಳೂ ಬಂದ್ ಆಗಬಹುದು. ಪಡಿತರ ಚೀಟಿ ರದ್ದತಿಗೆ ಸಾಮಾನ್ಯ ಕಾರಣಗಳು1.ಇ-ಕೆವೈಸಿ…

Read More

ನಾನು ಮಚಲಿ ಗ್ಯಾಂಗ್ ಮೆಂಬರ್, ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ ಮಾಡುವುದೇ ನನ್ನ ಪ್ಯಾಷನ್: ಶಾದ್ ಸಿದ್ದಿಖಿ

ಇಂದೋರ್ : ಸಚಿನ್ ಎಂಬ ಹಿಂದೂ ಹೆಸರಿಟ್ಟುಕೊಂಡು ಹಿಂದೂ(Hindu) ಯುವತಿಯರನ್ನು ಬಲೆಗೆ ಬೀಳಿಸಿಕೊಂಡು ಗರ್ಭಿಣಿಯರನ್ನಾಗಿ ಮಾಡುತ್ತಿದ್ದ ಶಾದ್ ಸಿದ್ದಿಖಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾನೆ. ನಾನು ಮಚಲಿ ಗ್ಯಾಂಗ್ನ ಸದಸ್ಯ, ಹಿಂದೂ ಹುಡುಗಿಯರನ್ನು ಗರ್ಭಿಣಿಯರನ್ನಾಗಿ ಮಾಡುವುದೇ ನನ್ನ ಪ್ಯಾಷನ್ ಎಂದು ಹೇಳಿದ್ದಾನೆ. ಶಾದ್ ಸಿದ್ದಿಖಿ ಎಂಬ ಮುಸ್ಲಿಂ ಯುವಕನ ಮೇಲೆ’ಸಚಿನ್’ ಎಂಬ ಹಿಂದೂ ಹೆಸರು ಇಟ್ಟುಕೊಂಡು 26 ವರ್ಷದ ಹಿಂದೂ ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿದೆ. ಯುವತಿಗೆ ಆತ ಮುಸ್ಲಿಂ…

Read More

ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಗೆ ಗೌರವ ಡಾಕ್ಟರೇಟ್ ಪದವಿ

ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.  ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್…

Read More

Constable Jobs 2025: 7565 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

 ಉದ್ಯೋಗಾಕಾಂಕ್ಷಿಗಳಿಗೆ ಸಿಬ್ಬಂದಿ ಆಯ್ಕೆ ಆಯೋಗ (SSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ 7,565 ಕಾನ್ಸ್ಟೇಬಲ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕೋರಿ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 7,565 ಕಾನ್ಸ್ಟೇಬಲ್ (ಕಾರ್ಯನಿರ್ವಾಹಕ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಯಾವುದೇ ಕೋರ್ಸ್ನಲ್ಲಿ ಇಂಟರ್ಮೀಡಿಯೇಟ್ ಉತ್ತೀರ್ಣರಾದ ನಿರುದ್ಯೋಗಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ನಲ್ಲಿ ವಿಳಂಬವಿಲ್ಲದೆ ಅರ್ಜಿ…

Read More

ಮಕ್ಕಳ ಸರಣಿ ಸಾವು ಹಿನ್ನೆಲೆ ರಾಜ್ಯಾದ್ಯಂತ `ಕಾಫ್ ಸಿರಪ್’ ಟೆಸ್ಟ್ ಗೆ ಮುಂದಾದ ಆರೋಗ್ಯ ಇಲಾಖೆ

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾವು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಎಲ್ಲಾ ಬ್ರ್ಯಾಂಡ್ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಸಂಗ್ರಹಕ್ಕೆ ಮುಂದಾಗಿದೆ. ಹೌದು, ರಾಜ್ಯ ಆರೋಗ್ಯ ಇಲಾಖೆಯು ರಾಜ್ಯಕ್ಕೆ ಸರಬರಾಜು ಆಗುತ್ತಿರುವ ಕಾಫ್ ಸಿರಪ್ ಗಳನ್ನು ಟೆಸ್ ಮಾಡಲು ನಿರ್ಧರಿಸಿದೆ. ಔಷಧ ನಿಯಂತ್ರಣ ಹಾಗೂ ಸರಬರಾಜು ಇಲಾಖೆ ಕಾಫ್ ಸಿರಪ್ ಗಳ ಟೆಸ್ಟ್ ಮಾಡಲು ಮುಂದಾಗಿದ್ದು, ರಾಜ್ಯದ ಎಲ್ಲೆಡೆ ಕಾಫ್ ಸಿರಪ್ ಗಳ…

Read More

ಉಡುಪಿ : AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ- ಮಹಿಳೆಯ ಬಂಧನ

ಉಡುಪಿ : ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಕೊಲೆಗೆ ಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭನಾ (27) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ಮಹಮದ್‌ ಫೈಸಲ್ ಖಾನ್ (27), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್‌ ಶುಕುರ್…

Read More

ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆ..!!

ಯಕ್ಷಗಾನ ಕಲಾವಿದ ಕಾಲ್ತೋಡು ಗ್ರಾಮದ ಬಲಗೋಣ ನಿವಾಸಿ, ದಿ.ಕೊಪ್ಪಾಟಿ ಮುತ್ತ ಗೌಡ ಅವರು ಪುತ್ರ  ದಾಮೋದರ ಗೌಡ (33) ಅವರು ಅ. 3ರಂದು ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಅವರು ಬೆಳಗ್ಗೆ ಮನೆಮಂದಿ ನೋಡಿದಾಗ ಮಲಗಿಕೊಂಡ ಸ್ಥಳದಲ್ಲಿ ಇರಲಿಲ್ಲ, ಹುಡುಕಾಡಿದಾಗ ಮನೆಯಿಂದ 500 ಮೀ. ದೂರದಲ್ಲಿನ ಮರಕ್ಕೆ ತನ್ನದೇ ಬನಿಯನನ್ನು ಹರಿದು ಹಗ್ಗ ಮಾಡಿಕೊಂಡು ನೇಣು ಬಿಗಿದುಕೊಂಡಿರುವುದು ಕಂಡುಬಂದಿತ್ತು. ತತ್‌ಕ್ಷಣ ನೇಣಿನಿಂದ ಇಳಿಸಿದರೂ ಕೊನೆಯುಸಿರೆಳೆದಾಗಿತ್ತು. ಅವರು ದಂಪತಿಯ ನಡುವೆ ಜಗಳ…

Read More

ಮಂಗಳೂರು: ಲಿಂಕ್ ಕ್ಲಿಕ್ ಮಾಡಿ 42.50 ಲಕ್ಷ ರೂ. ಕಳಕೊಂಡ ವ್ಯಕ್ತಿ- ಪ್ರಕರಣ ದಾಖಲು

ಮಂಗಳೂರು: ಹೂಡಿಕೆ ಕುರಿತಂತೆ ಅಪರಿಚಿತ ಸಂಖ್ಯೆಯಿಂದ ವಾಟ್ಸ್ಆ್ಯಪ್‌ಗೆ ಬಂದ ಲಿಂಕ್ ಕ್ಲಿಕ್ ಮಾಡಿ 42.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸೆನ್ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ದೂರುದಾರರ ಜು.13ರಂದು ಪ್ರಿಯಾ ಅಗರ್ವಾಲ್ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ಹೂಡಿಕೆ ಬಗ್ಗೆ ಮಾಹಿತಿ ಇರುವ ಲಿಂಕ್ ತನಗೆ ಕಳುಹಿಸಿದ್ದರು. ಅದನ್ನು ಕ್ಲಿಕ್ ಮಾಡಿ ನೋಡಿದ ಬಳಿಕ ಇನ್ನೊಂದು ಲಿಂಕ್ ಕಳುಹಿಸಿ ಆ್ಯಪ್ ನಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚಿಸಿದ್ದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ನಂಬರ್ ಕೂಡಾ ಕಳುಹಿಸಿಕೊಟ್ಟಿದ್ದರು. ಅವರು…

Read More

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡುವಂತಿಲ್ಲ: ಆರೋಗ್ಯ ಇಲಾಖೆ ಆದೇಶ

ಮಕ್ಕಳು ಕೆಮ್ಮು, ಶೀತದಿಂದ ಬಳಲುತ್ತಿದ್ದರೆ ಮಕ್ಕಳಿಗೆ ಸಿರಪ್ ನೀಡುವುದು ಸಾಮಾನ್ಯ. ಆದರೆ ಹೀಗೆ ಸಿರಪ್ ಸೇವಿಸಿದ್ದ ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿರುವ ಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾದಲ್ಲಿ ಈವರೆಗೆ 11 ಮಕ್ಕಳು ಕೆಮ್ಮಿನ ಸಿರಪ್ ನಿಂದ ಬಲಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ 9 ಮಕ್ಕಳು ಹಾಗೂ ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಮೃತಪಟ್ಟಿದ್ದಾರೆ. ಮಕ್ಕಳು ಶೀತ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಈ ವೇಳೆ ವೈದ್ಯರ ಸಲಹೆಯಂತೆಯೇ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಲಾಗಿದೆ. ಈ…

Read More

ಮಿಥುನ್ ರೈ ಅವರ ಹುಟ್ಟುಹಬ್ಬ

ಮಂಗಳೂರು: ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟುಹಬ್ಬ. ಅದ್ಬುತ ಮಾತುಗಾರ, ಸಂಘಟಕ,ಸಮಾಜ ಸೇವಕ,ಸಮರ್ಥ ಯುವ ನಾಯಕರಾಗಿರುವ ಮಿಥುನ್ ರೈ ಅವರ ಹುಟ್ಟುಹಬ್ಬಕ್ಕೆ ಲಯನ್ ಅನಿಲ್ ದಾಸ್ ರವರು ಶುಭ ಹಾರೈಸಿದರು.

Read More