ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : 55.88 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

ಬೆಂಗಳೂರು: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲ ಖಾದರ್ ಶೇಕ್ ಎಂಬಾತ ವಿಚಾರಣೆ ವೇಳೆ ಹಲವು ವಿಷಯ ಬಾಯ್ಬಿಟ್ಟಿದ್ದ. ಇದರ ಅನ್ವಯ ಬೆಳಗಾವಿ ಮೂಲದ ಪ್ರಶಾಂತ್…

Read More

ಮೊಟ್ಟೆ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ- ಸ್ಯಾಂಪಲ್ ಟೆಸ್ಟ್ ನಲ್ಲಿ ವರದಿ ಬಹಿರಂಗ

ಇತ್ತೀಚಿಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಅಲರ್ಟ್ ಆದ ಆರೋಗ್ಯ ಇಲಾಖೆ ಮೊಟ್ಟೆ ಟೆಸ್ಟ್ ಮಾಡಲು ಮುಂದಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ವಿವಿಧ ಮಾದರಿ ಮೊಟ್ಟೆ ಟೆಸ್ಟ್ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮೊಟ್ಟೆ ಸ್ಯಾಂಪಲ್ ರಿಪೋರ್ಟ್ ಬಹಿರಂಗ ಆಗಿದ್ದು ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ತಿಳಿದುಬಂದಿದೆ. 27 ಮೊಟ್ಟೆಗಳ ಸ್ಯಾಂಪಲ್ ಟೆಸ್ಟಿಗೆ ಆರೋಗ್ಯ ಇಲಾಖೆ ಒಳಪಡಿಸಿತ್ತು. ಇದೀಗ…

Read More

ಮಂಗಳೂರು: ಅನಧಿಕೃತವಾಗಿ ಬೀಫ್ ಸಾಗಿಸುತ್ತಿದ್ದ ತಂದೆ,ಮಗಳಿಗೆ ಹಲ್ಲೆ- ಇಬ್ಬರು ವಶಕ್ಕೆ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೀಫ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ 11 ವರ್ಷದ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ. ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಅಬ್ದುಲ್ ಸತ್ತಾರ್ ಮುಲ್ಲರ್ ಪಟ್ನ ಎಂಬುವವರು ತಮ್ಮ 11 ವರ್ಷದ ಮಗಳೊಂದಿಗೆ ಬೈಕ್‌ನಲ್ಲಿ ಸುಮಾರು 19 ಕೆಜಿ ದನದ ಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದರು. ಮಳಲಿ…

Read More

ಊಟದ ನಂತರ ಏಲಕ್ಕಿ ತಿನ್ನುವುದರಿಂದ ಸಿಗುವ ಅದ್ಭುತ ಪ್ರಯೋಜನಗಳಿವು.!

ಅನೇಕ ಜನರು ಊಟದ ನಂತರ ಸಿಹಿತಿಂಡಿಗಳು ಅಥವಾ ಮೌತ್ ಫ್ರೆಶ್ನರ್’ಗಳನ್ನು ತೆಗೆದುಕೊಳ್ಳುತ್ತಾರೆ. ಅವ್ರು ಸೋಂಪು ಅಥವಾ ಏಲಕ್ಕಿಯನ್ನ ಮೌತ್ ಫ್ರೆಶ್ನರ್ ಆಗಿ ತಿನ್ನುತ್ತಾರೆ. ಆಯುರ್ವೇದವು ಉತ್ತಮ ರುಚಿಯನ್ನ ನೀಡುವುದಲ್ಲದೆ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಎಂದು ಹೇಳುತ್ತದೆ. ಹೆಚ್ಚಿನ ಜನರಿಗೆ ಸೋಂಪು ಬಗ್ಗೆ ತಿಳಿದಿದ್ದರೂ, ಏಲಕ್ಕಿ ಬಗ್ಗೆ ಹೆಚ್ಚು ತಿಳಿದಿಲ್ಲ. ಆಯುರ್ವೇದದ ಪ್ರಕಾರ, ಏಲಕ್ಕಿಯನ್ನ ಮಸಾಲೆಗಳ ರಾಣಿ ಎಂದು ಕರೆಯಲಾಗುತ್ತದೆ. ಏಕೆಂದರೆ ಅದರ ಆರೊಮ್ಯಾಟಿಕ್ ವಾಸನೆಯು ಬಹಳ ಶಕ್ತಿಶಾಲಿ ಗುಣಗಳನ್ನ ಹೊಂದಿದೆ. ಅದಕ್ಕಾಗಿಯೇ ಊಟದ ನಂತರ ಅದನ್ನು ತಿನ್ನುವುದು ಒಳ್ಳೆಯದು…

Read More

ದೆವ್ವ ಹಿಡಿದಿದೆ ಎಂದು ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯ ಹತ್ಯೆ!

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು,  ದೆವ್ವ ಹಿಡಿದಿದೆ ಅಂತ ಮಹಿಳೆಯ ಬರ್ಬರ ಕೊಲೆ ಮಾಡಲಾಗಿದೆ. ಬೇವಿನ ಕಟ್ಟಿಗೆಯಿಂದ ಹೊಡೆದು ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಕಲ್ಬುರ್ಗಿ ಮೂಲದ ಮಹಿಳೆಯನ್ನು ಮಹಾರಾಷ್ಟ್ರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸಂಬಂಧಿಕರು ಮಹಿಳೆಯನ್ನು ಹೊಡೆದು ಕೊಲೆ ಮಾಡಿದ್ದಾರೆ 38 ವರ್ಷದ ಮುಕ್ತಬಾಯಿ ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ. ಕಲಬುರ್ಗಿಯ ಆಳಂದದ ನಿವಾಸಿಯಾಗಿರುವ ಮುಕ್ತಬಾಯಿ ಆಗಿರುವ ಈಕೆ ಮಹಾರಾಷ್ಟ್ರದ ಮುರುಮ್ ಗ್ರಾಮದಲ್ಲಿ ಭೀಕರವಾಗಿ ಕೊಲೆಯಾಗಿದ್ದಾಳೆ. ಕಾರಣ ಏನೆಂದರೆ ಈಕೆಗೆ…

Read More

ಹೆಜಮಾಡಿ ಗರಡಿಯಲ್ಲಿ ವೃದ್ಧೆಯ ಸರ ಎಗರಿಸಿದ ಕಳ್ಳಿಯರ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನಡೆಯುತ್ತಿದ್ದ ನೇಮೋತ್ಸವದ ವೇಳೆ ವೃದ್ಧೆಯ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿದ ಪರಾರಿಯಾಗಿದ್ದ ಮೂವರು‌ ಮಹಿಳೆಯರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಿವಾಸಿಗಳಾದ ಕಾಳಿಯಮ್ಮ, ಶೀಥಲ್ ಹಾಗೂ ಮಾರಿ ಬಂಧಿತ ಆರೋಪಿಗಳು.  ಹೆಜಮಾಡಿಯ ಗರಡಿಯಲ್ಲಿ ನಡೆಯುತ್ತಿದ್ದ ನೇಮೋತ್ಸವದ ವೇಳೆ ಕಮಲ ಎಂಬವರ ಕತ್ತಿನಿಂದ ಸರ ಎಗರಿಸುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳೆಯರನ್ನು ಪುತ್ತೂರಿನಲ್ಲಿ ಗುರುತಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಅದರಂತೆ ಪಡುಬಿದ್ರೆ…

Read More

ಪುತ್ತೂರು: ಮೆದುಳು ನಿಷ್ಕ್ರೀಯಗೊಂಡ ಯುವತಿಯ ಅಂಗಾಂಗ ದಾನ ಮಾಡಿದ ಕುಟುಂಬ

ಪುತ್ತೂರು: ಮೆದುಳಿನ ರಕ್ತಸ್ರಾವದಿಂದಾಗಿ ‌ಮೃತಪಟ್ಟ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬ ಬೇರೆ ಕುಟುಂಬಗಳ ಪಾಲಿಗೆ ಬೆಳಕಾಗಿ ಮಾನವೀಯತೆ ಮೆರೆದಿದೆ. ಸುಳ್ಯದ ರಥಬೀದಿ ‌ನಿವಾಸಿ ಸಿಂಧೂ ಎಂಬ ಯುವತಿ ಪುತ್ತೂರು ಆದರ್ಶ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದರು. ಡಿ. 16 ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಬಸ್ಸಿನ ಸೀಟಿನಿಂದ ಜಾರಿ ಬಿದ್ದಿದ್ದರು. ತಕ್ಷಣವೇ ಅವರಿಗೆ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನರಕ್ಕೆ ಸಮಸ್ಯೆ ಉಂಟಾಗಿದ್ದ ಕಾರಣದಿಂದ ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ…

Read More

ಉಪ್ಪಿನಂಗಡಿ: ಚಾಲಕನಿಗೆ ಎದೆನೋವು- ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಾಗ ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ವಕೀಲ ನೆಲ್ಯಾಡಿಯ ಇಸ್ಮಾಯಿಲ್ ಅವರ ಪುತ್ರ ಸಲ್ಮಾನುಲ್‌ ಫಾರಿಸ್ ತಕ್ಷಣವೇ…

Read More

ಉಡುಪಿ: ನಕಲಿ ಚಿನ್ನ ನೀಡಿ ವಂಚನೆ..! ಆರೋಪಿಯ ಬಂಧನ

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಎಂದು ಗುರುತಿಸಲಾಗಿದೆ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 4,50,000 ರೂ. ನಗದು…

Read More

ಮೈಸೂರು ಅರಮನೆ ಮುಂಭಾಗ ಸಿಲಿಂಟರ್‌ ಸ್ಫೋಟ..!! ಮೂವರು ಸಾವು, ಐವರು ಗಂಭೀರ

ಬಲೂನ್ ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ. ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದ್ದು, ತೀವ್ರತೆಗೆ ದೇಹಗಳು ಛಿದ್ರ ಛಿದ್ರಗೊಂಡಿದೆ. ಘಟನೆಯಲ್ಲಿ ಐದು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಮನೆ ಹೊರಗಡೆ ಯುವಕನೊಬ್ಬ ಸೈಕಲ್ ನಲ್ಲಿ ಬಲೂನ್ ಮಾರುತ್ತಿದ್ದು, ಗ್ಯಾಸ್ ತುಂಬಿಸುವ ವೇಳೆ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಬಲೂನ್ ಮಾರುವ…

Read More