Headlines

ಉಳ್ಳಾಲ ಮೊಸರು ಕುಡಿಕೆ ಮೆರವಣಿಗೆಯಲ್ಲಿ ಮಹಿಳಾ ಪೊಲೀಸರ ಜೊತೆ ಅಸಭ್ಯ ವರ್ತನೆ – ಇಬ್ಬರ ಬಂಧನ

ಉಳ್ಳಾಲ: ತೊಕ್ಕೊಟ್ಟಿನಲ್ಲಿ ಶನಿವಾರ ರಾತ್ರಿ ನಡೆದಿದ್ದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಕೈ ಸನ್ನೆ ಮಾಡಿ, ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ತೊಕ್ಕೊಟ್ಟುವಿನ ಜೈ ವೀರ ಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ….

Read More

ಹೋಗಿ ಸಾಯಿ ಎಂದರೆ ಆತ್ಮಹತ್ಯೆಗೆ ಪ್ರಚೋದನೆ ಆಗಲ್ಲ : ಹೈಕೋರ್ಟ್ ಮಹತ್ವದ ಆದೇಶ

ಜಗಳದ ಸಂದರ್ಭದಲ್ಲಿ ಹೋಗಿ ಸಾಯಿ ಎಂದು ಹೇಳಿರುವ ಮಾತು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗದು ಎಂದು ಹೈಕೋರ್ಟ್ ತೀರ್ಪು ನೀಡಿದ್ದು, ಪತಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಡಿ ಮಹಿಳೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ತನ್ನ ಪತಿಯ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೂರು ಮತ್ತು ಪ್ರಥಮ ಮಾಹಿತಿ ವರದಿ (‘ಎಫ್ಐಆರ್’) ರದ್ದುಗೊಳಿಸುವಂತೆ ಕೋರಿ ಹುಬ್ಬಳ್ಳಿ ಮೂಲದ ಫಿಬಿ ಗೌತಮ್ ಅವರು ಸಲ್ಲಿಸಿದ್ದ ಸಲ್ಲಿಸಿದ ಕ್ರಿಮಿನಲ್ ಅರ್ಜಿಯಲ್ಲಿ, ಎಸ್. ವಿಶ್ವಜಿತ್ ಶೆಟ್ಟಿ, ಜೆ. ಅವರ…

Read More

ಯುವತಿ ಎದುರೇ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿಯ ಹುಚ್ಚಾಟ.!

 ಚಾಮರಾಜನಗರದ ಬಸ್ ನಿಲ್ದಾಣದಲ್ಲಿ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್ ಪ್ರೇಮಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಪ್ರದೀಪ್ ಎಂಬ ಯುವಕ ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದು, ಎದೆಗೆ ಚಾಕುವಿನಿಂದ ಇರಿದುಕೊಂಡು ಹುಚ್ಚಾಟ ಮೆರೆದಿದ್ದಾನೆ. ಯುವತಿ ಎದುರೇ ಪ್ರೀತಿಸುವಂತೆ ಎದೆಗೆ ಚಾಕುವಿನಿಂದು ಇರಿದುಕೊಂಡು ಯುವಕ ಪ್ರದೀಪ್ ಹುಚ್ಚಾಟ ನಡೆಸಿದ್ದಾನೆ. ಪ್ರದೀಪ್ ಚಾಮರಾಜನಗರ ತಾಲೂಕಿನ ಸಾಣೇಗಾಲ ಗ್ರಾಮದ ನಿವಾಸಿಯಾಗಿದ್ದು, ಗಾಯಾಳು ಪ್ರದೀಪ್ ನನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಾಮರಾಜನಗರ ಠಾಣೆ ಪೊಲೀಸರು ಭೇಟಿ…

Read More

ಧರ್ಮಸ್ಥಳದ ವಿಚಾರದಲ್ಲಿ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ : ಆರ್. ಅಶೋಕ್ ಹೇಳಿಕೆ

 ಧರ್ಮಸ್ಥಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಧರ್ಮಸ್ಥಳ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್ ಇದೆ, ಟಿಪ್ಪು ಜಯಂತಿ ಆಚರಿಸದರಲ್ಲ, ಅದೇ ರೀತಿ ಗ್ಯಾಂಗ್ ವೊಂದರಿಂದ ಒತ್ತಡ ಬಂದಿದೆ. ಯಾವನೋ ಅನಾಮಿಕ ಕೊಟ್ಟ ದೂರಿನಿಂದ ದೊಡ್ಡದು ಮಾಡಿದ್ದಾರೆ, ನೂರಾರು ಕೊಲೆಗಳು, ಅತ್ಯಾಚಾರಗಳು ಆಗಿವೆ ಎಂಬಂತೆ ಬಿಂಬಿಸಿದ್ದಾರೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮಾಡಿದ್ದಾರೆ ಎಂಬಂತೆ ಬಿಂಬಿಸಿದ್ದಾರೆ. ದಕ್ಷಿಣ ಕನ್ನಡ…

Read More

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ

ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು  ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ. ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇದಲ್ಲದೇ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ…

Read More

ಮಂಗಳೂರು : ಲಕ್ಕಿ ಸ್ಕೀಮ್ ಹೆಸರಲ್ಲಿ 10ಸಾವಿರ ಜನರಿಗೆ ಕೋಟಿ ಕೋಟಿ ಪಂಗನಾಮ-ಇಬ್ಬರ ಬಂಧನ

ಮಂಗಳೂರು : ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ದೋಚಿದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೊನೆಗೂ ಪ್ರಕರಣ ದಾಖಲಾಗಿದೆ. ನ್ಯೂ ಇಂಡಿಯಾ ರಾಯಲ್ ಸ್ಕೀಮ್ ಹೆಸರಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರಿಂದ ಹತ್ತು ಕೋಟಿಗೂ ಹೆಚ್ಚು ಪೀಕಿಸಿದ್ದಾನೆಂದು ಪ್ರಕರಣ ದಾಖಲಾಗಿದ್ದು, ಇದಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಂಪನಿಯ ಪ್ರೊಪ್ರೈಟರ್ ಮೊಹಮ್ಮದ್ ಅಶ್ರಫ್ ಮತ್ತು ಮ್ಯಾನೇಜರ್ ಆಗಿದ್ದ ಹನೀಫ್ ಬಂಧಿತರು. ಇವರು ಬಜಪೆಯವರಾಗಿದ್ದು ನ್ಯೂ ಇಂಡಿಯಾ ರಾಯಲ್ ಹೆಸರಿನಲ್ಲಿ ಕಾಟಿಪಳ್ಳದಲ್ಲಿ ಕಚೇರಿ ತೆರೆದು ಲಕ್ಕಿ ಸ್ಕೀಮ್…

Read More

ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ

ಮಂಗಳೂರು; ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳದ ಚಿನ್ನದ ವ್ಯಾಪಾರಿ ಶ್ರೀಹರಿ ದರೋಡೆಗೆ ಒಳಗಾದವರು. ಅಪಹರಿಸಿ ದರೋಡೆ ಮಾಡಿದ ನಂತರ ಅವರನ್ನು ದರೋಡೆಕೋರರು ಅವರನ್ನು ಶಿರಸಿಯಲ್ಲಿ ಬಿಟ್ಟುಕಳುಹಿಸಿದ್ದಾರೆ. ಶ್ರೀಹರಿಯವರು ಪೊಲೀಸರಲ್ಲಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶ್ರೀಹರಿ ಅವರು ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ 350 ಗ್ರಾಂ ಚಿನ್ನದ ಗಟ್ಟಿಯನ್ನು ಹಿಡಿದುಕೊಂಡು ರೈಲಿನ ಮೂಲಕ ಕೇರಳದಿಂದ ಮಂಗಳೂರು ಸೆಂಟ್ರಲ್‌ ರೈಲ್ವೆ ನಿಲ್ದಾಣಕ್ಕೆ…

Read More

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ- ಆರೋಪಿ ಅರೆಸ್ಟ್

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಯನ್ನು ಕುಕ್ಕಡೇಲು, ಕರಿಯನಂಗಡಿ, ಬೆಳವಾಯಿ ಗ್ರಾಮ ಮತ್ತು ಅಂಚೆ ಮೂಡಬಿದರೆ ರೆಹ್ಮಾನ( 60) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುತ್ತದೆ. ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿಯನ್ನು ಠಾಣೆಗೆ ಕರೆಯಿಸಿ…

Read More

ಪುತ್ತೂರು: ಅವಿವಾಹಿತೆ ಬಾವಿಗೆ ಬಿದ್ದು ಮೃತ್ಯು

ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಟಟಿರುವ ಬಗ್ಗೆ ವರದಿಯಾಗಿದೆ.ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆ‌ರ್.ಗೀತಾ (59.ವ)ರವರು ಮೃತರು.ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು, ಔಷಧಿ ಪಡೆಯುತ್ತಿದ್ದರು. ಸಹೋದರ ಶೇಖ‌ರ್ ಅವರ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು. ಆ.15ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದರು. ಬಳಿಕ ಅವರು ಮನೆಯಂಗಳದ ಬಾವಿಗೆ ಬಿದ್ದಿರುವ ಮಾಹಿತಿ ಬೆಳಕಿಗೆ ಬಂದಿದೆ. ಮೃತರು ಸಹೋದರರಾದ ಸೆಲೂನ್‌ನ ಮಾಲಕ ಶೇಖ‌ರ್, ಶಂಕ‌ರ್, ಸುರೇಶ್, ಸಹೋದರಿಯರಾದ ಆ‌ರ್. ವಿಜಯಾ,…

Read More

Trump-Putin ಭೇಟಿ ವೇಳೆ ತಲೆ ಮೇಲೆ ಹಾರಿದ ಅಮೆರಿಕದ B-2 bomber ಫೈಟರ್ ಜೆಟ್!

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಉಕ್ರೇನ್ ಸಂಘರ್ಷದ ಕುರಿತು ಉನ್ನತ ಮಟ್ಟದ ಸಭೆಗಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದಾಗ ಯುಎಸ್ ಫೈಟರ್ ಜೆಟ್ಗಳಿಂದ ಸುತ್ತುವರಿದ ಬಿ -2 ಸ್ಪಿರಿಟ್ ಸ್ಟೆಲ್ತ್ ಬಾಂಬರ್ ಶುಕ್ರವಾರ ಅಲಾಸ್ಕಾದಲ್ಲಿ ಅಮೆರಿಕದ ಮಿಲಿಟರಿ ಶಕ್ತಿಯನ್ನು ಪೂರ್ಣವಾಗಿ ಪ್ರದರ್ಶಿಸಿತು. ಪರಮಾಣು ಶಕ್ತಿಯಾಗಿರುವ ರಷ್ಯಾದೊಂದಿಗಿನ ಚರ್ಚೆಗೆ ಮುಂಚಿತವಾಗಿ ಈ ಪ್ರದರ್ಶನವು ಯುಎಸ್ ಪಡೆ ಮತ್ತು ಮಿಲಿಟರಿ ಶಕ್ತಿಯ ಸಂದೇಶವನ್ನು ಕಳುಹಿಸುವಂತೆ ತೋರಿತು. ಯುಎಸ್ ಬಿ -2 ಸುಮಾರು 2.1 ಬಿಲಿಯನ್ ಡಾಲರ್ ವೆಚ್ಚವಾಗುತ್ತದೆ,…

Read More