Headlines

ಧರ್ಮಸ್ಥಳ ಕೇಸ್: SIT ಭೇಟಿಯಾದ ಪದ್ಮಲತಾ ಕುಟುಂಬ, 38 ವರ್ಷಗಳ ಹಳೆಯ ಕೇಸ್ ತನಿಖೆಗೆ ಒತ್ತಾಯ

ಧರ್ಮಸ್ಥಳ ಗ್ರಾಮದಲ್ಲಿ ಒಂದು ಕಡೆ ಹೂತಿಟ್ಟ ಶವಗಳಿಗಾಗಿ ಎಸ್ಐಟಿ ಅಧಿಕಾರಿಗಳ ತಂಡದಿಂದ ತನಿಖೆ ನಡೆಸಲಾಗುತ್ತಿದೆ. ಮತ್ತೊಂದೆಡೆ 38 ವರ್ಷಗಳ ಹಳೆಯದಾದಂತ ಪದ್ಮಲತಾ ಪ್ರಕರಣವನ್ನು ತನಿಖೆ ನಡೆಸುವಂತೆ ಎಸ್ಐಟಿ ಭೇಟಿಯಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಧರ್ಮಸ್ಥಳದ ಬೋಳಿಯಾರ್ ನಿವಾಸಿಯಾಗಿದದಂತ ಪದ್ಮಲತಾ ಕಾಲೇಜಿಗೆ ತೆರಳುತ್ತಿದ್ದಾಗ ನಿಗೂಢವಾಗಿ ಸಾವನ್ನಪ್ಪಿದ್ದಳು. ಆಕೆಯ ಶವವು 57 ದಿನಗಳ ಬಳಿಕ ಪತ್ತೆಯಾಗಿತ್ತು. ಈ ಬಗ್ಗೆ ಈ ಹಿಂದೆ ಸಿಐಡಿ ತನಿಖೆ ನಡೆಸಿತ್ತು. ಈಗ ಎಸ್ಐಟಿ ಕೂಡ ತನೆಗೆ ನಡೆಸಬೇಕು ಎಂಬುದಾಗಿ ಪದ್ಮಲತಾ ಸಹೋದರಿ ಇಂದ್ರಾವತಿ ಎಸ್ಐಟಿ…

Read More

 ಧರ್ಮಸ್ಥಳ ಕೇಸ್ ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಎಂಟ್ರಿ : ಇಂದು ಅಸ್ಥಿಪಂಜರ ಪತ್ತೆ ಬಗ್ಗೆ ಮಾಹಿತಿ ಸಂಗ್ರಹ.!

 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಓದಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇದೀಗ ಇಂದು ಧರ್ಮಸ್ಥಳಕ್ಕೆ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇಂದು ಭೇಟಿ ನೀಡಲಿದೆ. ಪ್ರಕರಣದ ಬಗ್ಗೆ ಇಂದು ಸಂಪೂರ್ಣ ಮಾಹಿತಿ ಕಲೆ ಹಾಕಲಿದೆ. ಪ್ರಕರಣದ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಆಯೋಗ ಮಾಹಿತಿ ಪಡೆಯಲಿದೆ. ಇದೀಗ ಧರ್ಮಸ್ಥಳದಲ್ಲಿ ಅಸ್ತಿಪಂಜರ ಶೋಧ ಕಾರ್ಯಕ್ಕೆ ರಾಷ್ಟೀಯ ಮಾನವ ಹಕ್ಕುಗಳ ಆಯೋಗ ಕೂಡ ಎಂಟ್ರಿ ಕೊಟ್ಟಿದೆ. ಧರ್ಮಸ್ಥಳದಲ್ಲಿ ಅಸ್ತಿ ಪಂಜರ ಶೋಧ ಕೇಸ್ಗೆ…

Read More

ಪುತ್ತೂರು: 10 ಕೆಜಿ ತೂಕದ ತಾಮ್ರದ ಗಂಟೆ ಕಳ್ಳತನ- ಆರೋಪಿ ಅರೆಸ್ಟ್

ಪುತ್ತೂರು: 10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಸಂಶುದ್ದೀನ್ @ ಸಂಶು (50) ಎಂದು ಗುರುತಿಸಲಾಗಿದೆ. ಜುಲೈ 26 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಮಾರು 10 ಕೆಜಿ ತೂಕದ ಸುಮಾರು 8000/- ರೂ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ : 26.07.2025 ರಂದು…

Read More

ಮಂಗಳೂರು: ಅಮೂಲ್ಯ ಸೇವಾ ಪ್ರತಿಷ್ಠಾನದ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ

ಮಂಗಳೂರು: ಅಮೂಲ್ಯ ಸೇವಾ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುರತ್ಕಲ್ ಕುಲಾಲ ಸುಧಾರಕ ಸಂಘ ಇಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಜಯೇಶ್ ಗೋವಿಂದ ವಹಿಸಿದ್ದರು. ವಿಧ್ಯಾರ್ಥಿ ಜೀವನ ಮತ್ತು ಮುಂದಿನ ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣದ ಕುರಿತು ಉಪನ್ಯಾಸವನ್ನು ಶ್ರೀಯುತ ‌ದಾಮೋದರ ಶರ್ಮ ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ. ಶ್ರೀ ಎ.ಎನ್.‌ ಕುಲಾಲ್‌ ಮಾಲಕರು ದುರ್ಗಾ ರಬ್ಬರ್ ಇಂಡಸ್ಟ್ರೀಸ್ ಬೆಂಗಳೂರು, ಶ್ರೀ ದಿವಾಕರ್ ಬೆಂಗಳೂರು. , ಲಯನ್. ಅನಿಲ್ ದಾಸ್…

Read More

ಮಂಗಳೂರು: ಗಾಂಜಾ ಮಾರಾಟ ಪ್ರಕರಣ- 7 ಮಂದಿ ಅರೆಸ್ಟ್

ಮಂಗಳೂರು: ಮಾದಕವಸ್ತು ಮುಕ್ತ ಮಂಗಳೂರು’ ಅಭಿಯಾನದಡಿಯಲ್ಲಿ ವ್ಯಾಪಕ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 8 ರಂದು ನಗರದ ವಿವಿಧ ಭಾಗಗಳಲ್ಲಿ 7 ಮಂದಿಯನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಅಕ್ರಮ ಮಾದಕವಸ್ತು ಮಾರಾಟದ ಮೇಲೆ ದಾಳಿ ನಡೆಸಿ ದ ಪೊಲೀಸರು 5 ಕಿಲೋಗ್ರಾಂಗಳಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಶೈಕ್ಷಣಿಕ ಮತ್ತು ವಸತಿ ಪ್ರದೇಶಗಳಲ್ಲಿ ಮತ್ತು ಸುತ್ತಮುತ್ತ ಗಾಂಜಾ ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ…

Read More

ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮ – ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಶೇಖರ ಲಾಯಿಲ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ವಸಂತ ಗಿಳಿಯಾರ್ ಎಂಬಾತ ಫೇಸ್ ಬುಕ್ ನಲ್ಲಿ ಹಾಕಿರುವ ಸಂದೇಶದಿಂದ ಧರ್ಮ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತಿದ್ದು ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುವ ಸಾಧ್ಯತೆಗಳಿವೆ ಎಂಬುದಾಗಿ ದೂರು…

Read More

ವಿದೇಶದಲ್ಲಿರುವ ಪತಿ ಮೊಬೈಲ್ ಫೋನ್ ಮೂಲಕವೇ ಹೆಂಡತಿಗೆ ತಲಾಖ್..! ದೂರು ದಾಖಲು

ಪಡುಬಿದ್ರಿ: ದೇಶದಲ್ಲಿ ತ್ರಿವಳಿ ತಲಾಖ್ ನಿಷೇಧವಾಗಿದ್ದರೂ, ಉಡುಪಿಯಲ್ಲಿ ತಲಾಖ್ ಪ್ರಕರಣವೊಂದು ವರದಿಯಾಗಿದ್ದು. ವಿದೇಶದಲ್ಲಿರುವ ಪತಿ ಮೊಬೈಲ್ ಫೋನ್ ಮೂಲಕವೇ ಹೆಂಡತಿಗೆ ತಲಾಖ್ ನೀಡಿದ್ದಾನೆ. ಈ ಕುರಿತಂತೆ ಇದೀಗ ಸಂತ್ರಸ್ಥೆ ಮಹಿಳೆ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದಾರೆ. ಪತಿಯ ಮನೆಮಂದಿಯೂ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎರ್ಮಾಳು ತೆಂಕ ಗ್ರಾಮದ ನಿವಾಸಿ ಸುಹಾನಾ ದೂರು ನೀಡಿದ್ದು ಎರ್ಮಾಳು ಗುಜ್ಜಿ ಹೌಸ್‌ನ ಮುಬೀನ್ ಶೇಖ್ ಎಂಬಾತನೊಂದಿಗೆ 2024ರ ಅಕ್ಟೋಬರ್‌ನಲ್ಲಿ ವಿವಾಹವಾಗಿದ್ದು ಒಂದು ತಿಂಗಳ ಬಳಿಕ ಗಂಡನ ಮನೆಯವರು ವರದಕ್ಷಿಣೆಗಾಗಿ…

Read More

ದ.ಕ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಪತ್ತೆ!!

ಮಂಗಳೂರು: ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ ಹಿಮೋಗ್ಲೋಬಿನ್ ಪರೀಕ್ಷೆ ಮುಕ್ತಾಯಗೊಂಡಿದೆ. ವರದಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 5063 ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಇರುವುದು ಬೆಳಕಿಗೆ ಬಂದಿದೆ. ಒಂದು ತಿಂಗಳಿನಿಂದ ಜಿಲ್ಲೆಯ 1ನೇ ತರಗತಿಯಿಂದ 10 ರವರೆಗಿನ ಸರಕಾರಿ ಮತ್ತು ಅನುದಾನಿತ ಶಾಲೆಗಳ 49,575 ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ರಕ್ತಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 2609 ಮಂದಿಗೆ ಸೌಮ್ಯ ಪ್ರಕರಣ, 2444 ಮಂದಿಗೆ ಮಧ್ಯಮ ಮತ್ತು 10 ಮಂದಿಗೆ ತೀವ್ರ ರಕ್ತಹೀನತೆ ಇರುವುದು ಪತ್ತೆಯಾಗಿದೆ. “ಅನೀಮಿಯ…

Read More

ಒಂದೇ ಮನೆಯಲ್ಲಿ 80 ಮತದಾರರು ಎಂದ ರಾಹುಲ್ ಗಾಂಧಿಗೆ ಮನೆ ಮಾಲಿಕ ತಿರುಗೇಟು

ಬೆಂಗಳೂರು: ‘ಮಹದೇವಪುರ ಕ್ಷೇತ್ರದಲ್ಲಿ 1 ಬಿಎಚ್‌ಕೆ ಮನೆಯಲ್ಲಿ 80 ಮಂದಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ’ ಎಂಬ ರಾಹುಲ್‌ ಗಾಂಧಿ ಆರೋಪಕ್ಕೆ ಆ ಮನೆ ಮಾಲಿಕ ಜಯರಾಮ್‌ ರೆಡ್ಡಿ ಪ್ರತಿಕ್ರಿಯಿಸಿ, ತಿರುಗೇಟು ನೀಡಿದ್ದಾರೆ. ಸಾಮಾನ್ಯವಾಗಿ 6 ತಿಂಗಳಿಂದ 1 ವರ್ಷದವರೆಗೆ ವಾಸಿಸುವ ವಲಸೆ ಕಾರ್ಮಿಕರು ತಮ್ಮ ಮನೆಗೆ ಬಾಡಿಗೆಗೆ ಬರುತ್ತಾರೆ. ಮನೆ ಮಾಲೀಕ ಜಯರಾಮ್ ರೆಡ್ಡಿ ಸವಾಲು ಈ 35 ಮನೆಗಳ ಮಾಲೀಕರಾದ ಜಯರಾಮ್ ರೆಡ್ಡಿ ಅವರು ರಾಹುಲ್ ಗಾಂಧಿ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. “ನೋಡಿ, ಇವೆಲ್ಲ…

Read More

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧಕ್ಕೆ ಸುಪ್ರೀಂಕೋರ್ಟ್ ನಕಾರ

ನವದೆಹಲಿ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳನ್ನು ನಿರ್ಬಂಧಿಸುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ. ಮಧ್ಯಂತರ ತಡೆಯಾಜ್ಞೆ ಅರ್ಜಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ. ವಿಚಾರಣೆ ವೇಳೆ ದೇವಾಲಯದ ಆಡಳಿತ…

Read More