Headlines

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ- ಚಿಕಿತ್ಸೆ ಫಲಕಾರಿಯಾಗದೆ ಕಾರು ಚಾಲಕ ಸಾವು

ವಿಟ್ಲ : ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಹಾಗೂ ಸಹೋದರಿ ಮಹಿಳೆ ಸಹಿತ ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ ನಡೆದಿದೆ.ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರಿಗೆ ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಸಹೋದರಿ ಮಹಿಳೆ ಹಾಗೂ ಮಗು ಗಂಭೀರ ಗಾಯ ಗೊಂಡಿ ದ್ದಾರೆ. ಗಾಯಳು ಗಳನ್ನು ಅನಂತಾಡಿ…

Read More

ಮಂಗಳೂರು: ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ

ಮಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ, ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.ಈ…

Read More

ಜುಲೈ 21ರಿಂದ 24ರವರೆಗೆ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತ..!

ಮಂಗಳೂರು: ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಅಸಾಧ್ಯವಾಗಿದ್ದ ಕುಳೂರು ಸೇತುವೆಯನ್ನು ದುರಸ್ಥಿ ಮಾಡುವ ಸಲುವಾಗಿ ಜುಲೈ 21ರ ರಾತ್ರಿ 8 ರಿಂದ 24ರವರೆಗೆ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿದೆ. ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಈ ರಸ್ತೆಯು ಸಾರ್ವಜನಿಕರ, ವಾಹನಿಗರ ಓಡಾಟಕ್ಕೆ ತೊಡಕಾಗಿದೆ. ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ…

Read More

ಹಿಮಾಚಲದಲ್ಲಿ ಪ್ರದೇಶದಲ್ಲಿ ಗುಡ್ಡ ಕುಸಿತ: ಬಂಟ್ವಾಳದ 47 ಮಂದಿಯ ರಕ್ಷಣೆ

ಬಂಟ್ವಾಳ: ಹಿಮಾಚಲದಲ್ಲಿ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದ್ದು, ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆಯಲ್ಲಿ ಯಾವುದೇ ಅಪಾಯವಿಲ್ಲ. ಸುಮಾರು 3 ಕಿ.ಮೀ.ವರೆಗೆ…

Read More

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: SIT ತನಿಖೆಯಲ್ಲಿ ಸೌಜನ್ಯ ಕೇಸ್‌ ಇಲ್ಲ- ಗೃಹ ಸಚಿವ್ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ರಾಜ್ಯ ಸರ್ಕಾರ ಕೊನೆಗೂ ತನಿಖೆಗೆ SIT ರಚನೆ ಮಾಡಿದೆ. ಆದರೆ ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣದ ತನಿಖೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ವಲ್ಪ ಯೋಚನೆ ಮಾಡಿ ನಾವು ತೀರ್ಮಾನ ಕೈಗೊಂಡಿದ್ದೇವೆ. ತನಿಖೆಯಲ್ಲಿ ಏನು ಬರುತ್ತದೆ ಅದನ್ನು ಕಾದು ನೋಡೋಣ. ಇದು ಸಣ್ಣ ವಿಚಾರ…

Read More

ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್‌.ಐ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ತನಿಖಾ ಪಿ.ಎಸ್‌.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ (55) ಎಂಬುವವರು ಆದಿತ್ಯವಾರ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮೃತರು ಉತ್ತರ ಕನ್ನಡದ ಕಾರವಾರ ಮೂಲದವರಾಗಿದ್ದು, ನಿನ್ನೆ (ಜುಲೈ 19) ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ್ದರು. ಆದರೆ, ಇಂದು (ಜುಲೈ 20) ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಅವರು…

Read More

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಹೂತಿಟ್ಟ ಪ್ರಕರಣ : ‘SIT’ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆ ಆದೇಶವನ್ನು ಹೊರಡಿಸಿದೆ. ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಹಂತಿ ಅವರ ನೇತೃತ್ವದ ತಂಡದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳ ತಂಡವು ಈ ವಿಶೇಷ ತನಿಖಾ ತಂಡದಲ್ಲಿದೆ. ಈ ತಂಡದಲ್ಲಿ ಅನುಚೇತ್ , ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ತನಿಖೆ ಶುರು ಮಾಡಲಿದೆ ಎನ್ನಲಾಗಿದೆ.

Read More

ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ವಿರುದ್ಧ ಇನ್ನಿಬ್ಬರಿಂದ ದೂರು..!

ಮಂಗಳೂರು : ಹಲವರಿಗೆ ಕೋಟ್ಯಂತರ ಹಣ ವಂಚಿದ ಆರೋಪಿ ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ರೋಶನ್ ಸಲ್ದಾನ (43) ಎಂಬಾತನಿಂದ ವಂಚನೆಗೊಳಗಾದ ಮಹಾರಾಷ್ಟ್ರ ಮತ್ತು ಅಸ್ಸಾಂನ ಇಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮಹಾರಾಷ್ಟ್ರದ ಉದ್ಯಮಿಯೊಬ್ಬರು 5 ಕೋಟಿ ರೂ. ಹಣವನ್ನು ಜು.16ರಂದು ಮತ್ತು ಅಸ್ಸಾಂ ರಾಜ್ಯದ ವ್ಯಕ್ತಿಯೊಬ್ಬರು 20 ಲಕ್ಷ ರೂ. ಹಣವನ್ನು ಜು.17 ಬ್ಯಾಂಕ್ ಮೂಲಕ ಆರೋಪಿಯ ಖಾತೆಗೆ ವರ್ಗಾಯಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿ ವಿರುದ್ಧ ಇವರು ನೀಡಿದ ದೂರಿನಂತೆ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಮಹಾರಾಷ್ಟ್ರದ ಉದ್ಯಮಿ…

Read More

ಹಿಂದೂಯೇತರ ಧರ್ಮ ಆಚರಣೆ: ನಾಲ್ವರು ನೌಕರರನ್ನು ಅಮಾನತುಗೊಳಿಸಿದ TTD

ಬಿಐಆರ್ಆರ್ಡಿ ಆಸ್ಪತ್ರೆಯ ಸ್ಟಾಫ್ ನರ್ಸ್ ಎಸ್.ರೋಸಿ, ಬಿಐಆರ್ಆರ್ಡಿ ಆಸ್ಪತ್ರೆಯ ಗ್ರೇಡ್-1 ಫಾರ್ಮಾಸಿಸ್ಟ್ ಎಸ್.ರೋಸಿ, ಎಸ್.ವಿ.ಆಯುರ್ವೇದ ಫಾರ್ಮಸಿಯ ಎಂ.ಪ್ರೇಮಾವತಿ ಮತ್ತು ಜಿ.ಅಸುಂತಾ ಅವರನ್ನು ಅಮಾನತುಗೊಳಿಸಲಾಗಿದೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲದ ಪೂಜ್ಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ನಿರ್ವಹಿಸುವ ಅಧಿಕೃತ ಸಂಸ್ಥೆಯಾದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹಿಂದೂಯೇತರರು ಮತ್ತು ಇತರ ಧರ್ಮಗಳನ್ನು ಆಚರಿಸುವ ಆರೋಪದ ಮೇಲೆ ನಾಲ್ವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ

Read More

40 ಲಕ್ಷದೊಳಗೆ ವಹಿವಾಟು ಆಗಿದ್ರೆ ‘GST ನೋಂದಣಿ’ ಬೇಕಿಲ್ಲ: ‘ವಾಣಿಜ್ಯ ತೆರಿಗೆ ಇಲಾಖೆ’ ಮಾಹಿತಿ

ಸಣ್ಣ ಸಣ್ಣ ವ್ಯಾಪಾರಿಗಳಿಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿರುವುದು ವ್ಯಾಪಕ ಚರ್ಚೆಗೆ ಒಳಗಾಗುತ್ತಿದೆ. ಇದೇ ಹೊತ್ತಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು 40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ವಾಣಿಜ್ಯ ತೆರಿಗೆ ಇಲಾಖೆಯ ಕೆಟಿಡಿ ಅಡಿಷನಲ್ ಕಮಿಷನರ್ ಚಂದ್ರಶೇಖರ್ ನಾಯ್ಕ್ ಅವರು ಮಾಹಿತಿ ಹಂಚಿಕೊಂಡಿದ್ದು, 40 ಲಕ್ಷದೊಳಗೆ ವಹಿವಾಟು ಆಗಿದ್ದರೇ ನೋಂದಣಿ ಬೇಕಾಗಿಲ್ಲ. 40 ಲಕ್ಷಕ್ಕಿಂತ ಹೆಚ್ಚು ವಹಿವಾಟು ಮಾಡಿದ್ದರೆ ಮಾತ್ರವೇ ಆದಾಯ ತೆರಿಗೆ ನೋಂದಣಿ ಮಾಡಿಸಬೇಕು ಎಂಬುದಾಗಿ…

Read More