30 ವರ್ಷ ಹಿಂದೆ 200 ರೂ.ಪಡೆದು ವಂಚಿಸಿದ್ದ ಆರೋಪಿ ಸೆರೆ
ಉಡುಪಿ: ಸರಕಾರಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ 30 ವರ್ಷಗಳ ಹಿಂದೆ 200 ರೂಪಾಯಿ ಪಡೆದು ಮೋಸ ಮಾಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೈಂದೂರಿನ ಮಯ್ಯಾಡಿಯ ಬಿ.ಕೆ. ರಾಮಚಂದ್ರ ರಾವ್ ಬಂಧಿತ ಆರೋಪಿ. ಸಿರ್ಸಿಯ ಬಿಳಿಗಿರಿ ಕೊಪ್ಪದ ವೆಂಕಟೇಶ ಅವರಿಗೆ ಪದವಿ ಓದುತ್ತಿರುವಾಗ ರಾಮಚಂದ್ರನ ಪರಿಚಯವಾಗಿತ್ತು. ಆತ ಸರಕಾರಿ ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ಕೆಲಸ ಕೊಡಿಸದೆ ವಂಚಿಸಿರುವ ಕುರಿತು ಪ್ರಕರಣ ದಾಖಲಾಗಿತ್ತು. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ…

