
Read Time:1 Minute, 2 Second
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಉರ್ಲಾಂಡಿಯಲ್ಲಿ ನಿನ್ನೆ (ಜ.06) ತಡರಾತ್ರಿ ನಡೆದಿದೆ.



ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದು, ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಬಳಿಕ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದನ್ನೂ ಓದಿ: ದುಃಖದ ಮಡುವಿನಲ್ಲೂ ಪತಿಯ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿತ್ತು. ರಾತ್ರೋ ರಾತ್ರಿ ಲಾರಿಯನ್ನು ರಸ್ತೆಯಿಂದ ತೆರವು ಮಾಡಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ.

