ಕೊಂಕಣ ರೈಲ್ವೆ ಮಾರ್ಗದಲ್ಲಿ ತಪ್ಪಿದ ರೈಲು ದುರಂತ: ಉಡುಪಿ, ಸುರತ್ಕಲ್‌ನಲ್ಲಿ ನಿಂತ ರೈಲುಗಳು

0 0
Read Time:2 Minute, 35 Second

ಉಡುಪಿ: ಜಾಗೃತ ಹಳಿ ನಿರ್ವಾಹಕ (ಟಿಎಂ) ಪ್ರದೀಪ್ ಶೆಟ್ಟಿ ಮಧ್ಯರಾತ್ರಿ 2:25ರ ಸುಮಾರಿಗೆ ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬದ್ರಿ ನಡುವೆ ರೈಲ್ವೆ ಹಳಿಯಲ್ಲಿ ಹಳಿ ಜಾಯಿಂಟ್ ಜಾರಿರುವುದನ್ನು ಪತ್ತೆ ಹಚ್ಚುವ ಮೂಲಕ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾರೆ.

ಘಟನೆ ಶನಿವಾರ ಮಧ್ಯರಾತ್ರಿಯ ಬಳಿಕ ನಡೆದಿದೆ. ಟ್ರ್ಯಾಕ್ ಜಾಯಿಂಟ್ ತಪ್ಪಿರುವುದನ್ನು ಕತ್ತಲಲ್ಲೇ ಪತ್ತೆ ಹಚ್ಚಿದ ಪ್ರದೀಪ್ ಶೆಟ್ಟಿ ತಕ್ಷಣ ಅದನ್ನು ಉಡುಪಿಯಲ್ಲಿದ್ದ ಮೇಲಾಧಿಕಾರಿಗಳ ಗಮನಕ್ಕೆ ತಂದರು. ಹಿರಿಯ ಅಧಿಕಾರಿಗಳು ತಕ್ಷಣ ಆರ್‌ಎಂಇ (ದುರಸ್ಥಿ ಸಲಕರಣೆಗಳಿರುವ ವಾಹನ)ದೊಂದಿಗೆ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಹಳಿಯನ್ನು ದುರಸ್ಥಿ ಗೊಳಿಸಿದರು. ಇದಕ್ಕೆ ಮೂರು ಗಂಟೆ ತಗಲಿದ್ದು, ಈ ಮಧ್ಯೆ ಮಾರ್ಗದಲ್ಲಿ ಬಂದ ರೈಲುಗಳನ್ನು ಉಡುಪಿ ಹಾಗೂ ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ತಡೆ ಹಿಡಿಯಲಾಯಿತು ಎಂದು ಕೊಂಕಣ ರೈಲ್ವೆಯ ಮಂಗಳೂರು ಪಿಆರ್‌ಓ ಸುಧಾ ಕೃಷ್ಣಮೂರ್ತಿ ತಿಳಿಸಿದರು.

ಉಡುಪಿ: ಜಾಗೃತ ಹಳಿ ನಿರ್ವಾಹಕ (ಟಿಎಂ) ಪ್ರದೀಪ್ ಶೆಟ್ಟಿ ಮಧ್ಯರಾತ್ರಿ 2:25ರ ಸುಮಾರಿಗೆ ಕೊಂಕಣ ರೈಲು ಮಾರ್ಗದ ಇನ್ನಂಜೆ ಹಾಗೂ ಪಡುಬದ್ರಿ ನಡುವೆ ರೈಲ್ವೆ ಹಳಿಯಲ್ಲಿ ಹಳಿ ಜಾಯಿಂಟ್ ಜಾರಿರುವುದನ್ನು ಪತ್ತೆ ಹಚ್ಚುವ ಮೂಲಕ ಸಂಭಾವ್ಯ ರೈಲು ದುರಂತವನ್ನು ತಪ್ಪಿಸಿದ್ದಾರೆ.

ಘಟನೆ ಶನಿವಾರ ಮಧ್ಯರಾತ್ರಿಯ ಬಳಿಕ ನಡೆದಿದೆ. ಟ್ರ್ಯಾಕ್ ಜಾಯಿಂಟ್ ತಪ್ಪಿರುವುದನ್ನು ಕತ್ತಲಲ್ಲೇ ಪತ್ತೆ ಹಚ್ಚಿದ ಪ್ರದೀಪ್ ಶೆಟ್ಟಿ ತಕ್ಷಣ ಅದನ್ನು ಉಡುಪಿಯಲ್ಲಿದ್ದ ಮೇಲಾಧಿಕಾರಿಗಳ ಗಮನಕ್ಕೆ ತಂದರು. ಹಿರಿಯ ಅಧಿಕಾರಿಗಳು ತಕ್ಷಣ ಆರ್‌ಎಂಇ (ದುರಸ್ಥಿ ಸಲಕರಣೆಗಳಿರುವ ವಾಹನ)ದೊಂದಿಗೆ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಹಳಿಯನ್ನು ದುರಸ್ಥಿ ಗೊಳಿಸಿದರು. ಇದಕ್ಕೆ ಮೂರು ಗಂಟೆ ತಗಲಿದ್ದು, ಈ ಮಧ್ಯೆ ಮಾರ್ಗದಲ್ಲಿ ಬಂದ ರೈಲುಗಳನ್ನು ಉಡುಪಿ ಹಾಗೂ ಸುರತ್ಕಲ್ ರೈಲು ನಿಲ್ದಾಣಗಳಲ್ಲಿ ತಡೆ ಹಿಡಿಯಲಾಯಿತು ಎಂದು ಕೊಂಕಣ ರೈಲ್ವೆಯ ಮಂಗಳೂರು ಪಿಆರ್‌ಓ ಸುಧಾ ಕೃಷ್ಣಮೂರ್ತಿ ತಿಳಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *