ಗುರುಪುರ ಸೇತುವೆಯಲ್ಲಿ ಅನಾಥ ಸ್ಥಿತಿಯಲ್ಲಿ ಸ್ಕೂಟರ್, ಚಪ್ಪಲಿ ಪತ್ತೆ, ನದಿಗೆ ಹಾರಿರುವ ಶಂಕೆ

0 0
Read Time:1 Minute, 20 Second

ಮಂಗಳೂರು ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರದ ಪಾಲ್ಗುಣಿ ನದಿಯ ಸೇತುವೆಯಲ್ಲಿ ಅನಾಥ ಸ್ಥಿತಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಮತ್ತು ಒಂದು ಜೊತೆ ಚಪ್ಪಲಿ ಪತ್ತೆಯಾಗಿದೆ. ಸ್ಕೂಟರ್ ವಾರೀಸುದಾರರು ಇದ್ದಲ್ಲಿ ತಿಳಿಸುವಂತೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.

ಈ ಮಧ್ಯೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಗ್ರಾಮದ ಪಡೀಲ್ ನಿವಾಸಿ ಗಣೇಶ್(48)ಎಂಬವರು 22ರ ರಾತ್ರಿ 8 ಗಂಟೆಯಿಂದ KA19 HM 4598 ಸಂಖ್ಯೆಯ ಸ್ಕೂಟರ್ ಜೊತೆ ನಾಪತ್ತೆಯಾದ ಬಗ್ಗೆ ಪತ್ನಿ ಅಶ್ವಿತಾ ಎಂಬವರು ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ. ಇದರಿಂದಾಗಿ ಗುರುಪುರ ಸೇತುವೆಯಲ್ಲಿ ಕಂಡುಬಂದ ಸ್ಕೂಟರ್ ಗಣೇಶ್ ಅವರದ್ದೇ ಎಂಬುದು ಖಚಿತವಾಗಿದೆ.

ಪತಿ ಗಣೇಶ್ ನಾಪತ್ತೆಯಾಗುವ ಸಂದರ್ಭ ನೀಲಿ ಚೆಕ್ಸ್ ಬಣ್ಣದ ಪಂಚೆ, ಗ್ರೇ ಬಣ್ಣದ ಟೀ ಶರ್ಟ್ ಧರಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸೇತುವೆಯಲ್ಲಿದ್ದ ಸ್ಕೂಟರನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *