
Read Time:1 Minute, 6 Second
ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು, ಜಾಮೀನು ಷರತ್ತನ್ನು ಉಲ್ಲಂಘಿಸಿದ್ದರು.
ಆ ಹಿನ್ನೆಲೆಯಲ್ಲಿ ತಾನೆಗೆ ಹಾಜರಾದ ರಿಯಾಜ್ ಅವರನ್ನು ಉಡುಪಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.


