ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ

0 0
Read Time:2 Minute, 24 Second

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಇಂದಿಗೆ 29 ದಿನಗಳು ಕಳೆದಿವೆ. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಗುಡ್ಡ ಕುಸಿತದಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್​ ನಾಪತ್ತೆಯಾಗಿದ್ದಾರೆ.

ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಕೊಚ್ಚಿ ಹೋದವರ ಬಗ್ಗೆ ಮಹತ್ವದ ಅಪ್ಡೇಟ್​​ ಸಿಕ್ಕಿದೆ.

ಹೌದು ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಶೋಧ ಕಾರ್ಯ ವೇಳೆ ಲಾರಿಯ ಜಾಕ್ ಹಾಗೂ ಬಿಡಿ ಭಾಗಗಳು ಪತ್ತೆಯಾಗಿವೆ. ಕೇರಳ ಮೂಲದ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಇದೀಗ ಕಾರ್ಯಾಚರಣೆಯ ವೇಳೆ ಪತ್ತೆಯಾಗಿದೆ. ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆಯ ವೇಳೆ ಲಾರಿಯ ಜಾಕ್ ಪತ್ತೆಯಾಗಿದೆ.

ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಎಂದು ಮಾಲೀಕ ಮುಫಿನ್ ಖಚಿತಪಡಿಸಿದ್ದಾರೆ. 29ನೇ ದಿನ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯ ಮುಂದುವರೆದಿದೆ. ಈಜುತಜ್ಞ ಈಶ್ವರ ಮಲ್ಪೆ ತಂಡದಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ಅರ್ಧ ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದೆ ವೇಳೆ ನದಿಯಲ್ಲಿ ಲಾರಿಯ ಎರಡು ಬಿಡಿ ಭಾಗಗಳು ಕೂಡ ಪತ್ತೆಯಾಗಿವೆ.

ನದಿಯಲ್ಲಿ ಲಾರಿಯ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿವೆ. ಲಾರಿಯ ಬಾಗಿಲದ ಕೀಲು ನನ್ನ ವಾಹನದಲ್ಲ. ಆದರೆ ಜಾಕ್ ನನ್ನ ವಾಹನದ್ದು ಎಂದು ನಾಪತ್ತೆ ಆದ ಬೆಂಜ್ ಲಾರಿಯ ಮಾಲೀಕ ಮುಫಿನ್ ಹೇಳಿಕೆ ನೀಡಿದ್ದಾರೆ. ಲಾರಿ ಕೊಚ್ಚಿ ಹೋದ 29 ದಿನಗಳ ಬಳಿಕ ಬಿಡಿ ಭಾಗ ಪತ್ತೆಯಾಗಿದ್ದು, ಇದೀಗ ಮೂವರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *