
ಕಂಟೈನರ್ ಹಡಗಿನಲ್ಲಿ ಅಗ್ನಿ ಅವಘಡ: ಭಾರತೀಯ ನೌಕಾಪಡೆಯಿಂದ ಜೀವ ರಕ್ಷಣೆ ಕಾರ್ಯ
ಮಂಗಳೂರು: ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹಾಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 18 ಮಂದಿಯನ್ನು ರಕ್ಷಿಸಿಸಲಾಗಿದ್ದು, ಅವರನ್ನು ಹೊತ್ತ ಭಾರತೀಯ ನೌಕಾಪಡೆಯ ಐಎನ್ಎಸ್ ಸೂರತ್ ಹಡಗು ಸೋಮವಾರ ರಾತ್ರಿ 10:45 ಕ್ಕೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ (ಎನ್ಎಂಪಿಎ) ಆಗಮಿಸಿದೆ. ಎಂ.ವಿ. ವಾನ್ ಹಾಯ್ 503 ಹಡಗು ಕೊಲೊಂಬೋದಿಂದ ಮುಂಬೈಯ ನ್ಹಾವಾ ಶೇವಾ ಕಂಟೈನರ್ ಟರ್ಮಿನಲ್ಗೆ ಪ್ರಯಾಣಿಸುತ್ತಿತ್ತು. ಆದರೆ ಜೂನ್ 9 ರಂದು ಕೇರಳದ ಬೇಪೂರ್ ಕರಾವಳಿಯಿಂದ…