ಕಾರ್ಕಳದಲ್ಲಿ ಭೀಕರ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಕಾರ್ಕಳ: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ…

Read More

ಬಾಲ್ಯದ ದ್ವೇಷಕ್ಕೆ 50 ವರ್ಷಗಳ ನಂತರ ಸೇಡು: ಕಾಸರಗೋಡಿನಲ್ಲಿ ಇಬ್ಬರು ಬಂಧನ

ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್ ಕಾರ್ಯಕ್ರಮದಲ್ಲಿ ಸರಿಯಾಗಿ ಸೇಡು ತೀರಿಸಿಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಪೊಲೀಸರು ಇದು 50 ವರ್ಷದ ವ್ಯಕ್ತಿಯ ಬಾಲ್ಯದ ದ್ವೇಷದ ಪ್ರಕರಣ ಎಂದು ಹೇಳಿದ್ದಾರೆ .ಬಾಲಕೃಷ್ಣನ್ ಅವರ…

Read More

ಎನ್‌ಐಎ ತನಿಖೆಗೆ ಆದೇಶ: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಮಾಧಾನ

ಬಂಟ್ವಾಳ, ಜೂ. 09 : ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್‌ಐಎ…

Read More

ಪತಿ ನಾಪತ್ತೆ: ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು. ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು ನಂತರ ಮನೆಗೆ ವಾಪಾಸಾಗುತ್ತಿದ್ದರು. ಆದರೆ 2023 ರ ಡಿಸೆಂಬರ್‌ನಲ್ಲಿ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಹಿಂದೂ ಸಂಘಟನೆಗಳು ಟಾರ್ಗೆಟ್? ದ.ಕ. ಎಸ್‌ಪಿಗೆ ಸ್ಪಷ್ಟನೆ ಕೇಳಿದ ಪೊಲೀಸ್ ಪ್ರಾಧಿಕಾರ

ಮಂಗಳೂರು ಜೂನ್ 06: ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ ದಕ್ಷಿಣಕನ್ನಡ ಪೊಲೀಸ್ ಇಲಾಖೆಗೆ ಇದೀಗ ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ದಕ್ಷಿಣಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಪೊಲೀಸರು ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಮಧ್ಯರಾತ್ರಿ ಆಗಮಿಸಿ ಅವರ…

Read More