ಕ್ರೇನ್ ಬಾಸ್ಕೆಟ್‌ನಿಂದ ಬಿದ್ದು ದುರಂತ: ಮನೆ ಸೋರಿಕೆ ಪರಿಶೀಲನೆ ವೇಳೆ ಅಪಘಾತ

ಉಡುಪಿ, ಜೂ. 14 : ಮನೆ ಸೋರಿಕೆಯನ್ನು ಪರಿಶೀಲಿಸಲು ಬಳಸುತ್ತಿದ್ದ ಕ್ರೇನ್ ಬಾಸ್ಕೆಟ್‌ನಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಕೋರ್ಟ್ ಬ್ಯಾಕ್ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆ (ಪಿಡಬ್ಯೂಡಿ) ಕಚೇರಿ ಬಳಿ ಜೂನ್ 14 ರಂದು ನಡೆದಿದೆ. ಮನೆಯ ಮೇಲ್ಛಾವಣಿಯ ಸ್ಲ್ಯಾಬ್‌ನಲ್ಲಿನ ಸೋರಿಕೆಯನ್ನು ಪರಿಶೀಲಿಸಲು ಕ್ರೇನ್ ಅನ್ನು ಬಳಸಿಕೊಂಡು ಇಬ್ಬರು ವ್ಯಕ್ತಿಗಳನ್ನು ಅದರ ಬಾಸ್ಕೆಟ್‌ನಲ್ಲಿ ಮೇಲೆತ್ತಲಾಗುತ್ತಿತ್ತು. ಆದರೆ ಈ ವೇಳೆ ಬಾಸ್ಕೆಟ್ ಓರೆಯಾದ ಕಾರಣ, ಅದರಲ್ಲಿದ್ದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಸ್ಥಳಕ್ಕೆ ಧಾವಿಸಿದ…

Read More

ಮಕ್ಕಳನ್ನು ಸುರಕ್ಷಿತವಾಗಿ ದಾಟಿಸುತ್ತಿದ್ದಾಗ ಬಸ್ ಡಿಕ್ಕಿ: ಯುವಕ ನಿಧನ

ಬಂಟ್ವಾಳ ಜೂನ್ 07: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಸಂಭವಿಸಿದೆ. ಮೃತರನ್ನು ಅಮೆಮ್ಮಾರ್ ನಿವಾಸಿ ಝಾಹಿದ್ (28) ಎಂದು ಗುರುತಿಸಲಾಗಿದೆ. ಅವರು ಶಾಲೆಗೆ ತೆರಳುವ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಆಗಮಿಸಿದ ಬಸ್ ಢಿಕ್ಕಿ ಹೊಡೆಯಿತು. ಘಟನೆಯಲ್ಲಿ ಝಾಹೀದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಆಟೋ…

Read More