ಕಾರ್ಕಳ: ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿ ಆತ್ಮಹತ್ಯೆ..!

0 0
Read Time:2 Minute, 2 Second

ಕಾರ್ಕಳ: ಹುಟ್ಟಿದ ಮಗುವಿನಿಂದ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಶಿಕ್ಷಕಿಯೊರ್ವರು ಆತ್ಮಹತ್ಯೆ ಮಾಡಕೊಂಡ ಘಟನೆ ಈದು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಈದು ಗ್ರಾಮದ ನಿವಾಸಿ ಪ್ರಸನ್ನಾ (29) ಎಂದು ಗುರುತಿಸಲಾಗಿದೆ.

ಮೂಡುಬಿದಿರೆಯ ನಿವಾಸಿ ಪ್ರಸನ್ನಾ ಕಾರ್ಕಳ ತಾಲೂಕು ಈದು ಗ್ರಾಮದ ರಾಜೇಶ್ ಎಂಬವರೊಂದಿಗೆ 2022ರಲ್ಲಿ ಮದುವೆಯಾಗಿತ್ತು. ರಾಜೇಶ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸನ್ನಾ ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇವರಿಗೆ ಮದುವೆಯಾಗಿ 10 ತಿಂಗಳ ಹೆಣ್ಣು ಮಗು ಇದ್ದು, ಈಕೆ ತನ್ನ ತಾಯಿ ಮನೆಗೆ ಫೋನಾಯಿಸಿ ಗಂಡನ ಮನೆಯವರು ಚೆನ್ನಾಗಿ ನೋಡುತ್ತಿದ್ದಾರೆಂದು ಹೇಳುತ್ತಿದ್ದಳು. ಆದರೆ ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಇದೇ ಕೊರಗಿನಿಂದ ಖಿನ್ನತೆಗೆ ಒಳಗಾಗಿದ್ದಳು. ಈ ಬಗ್ಗೆ ಪ್ರಸನ್ನಾರವರನ್ನು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪ್ರಸನ್ನಾ ತಾನು ಇಷ್ಟು ಓದಿದರೂ ತನಗೆ ಮಗುವಾದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ನ. 6ರಂದು ಗಂಡನ ಮನೆಯ ಡೈನಿಂಗ್ ಹಾಲ್ ನಿಂದ ಮಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ಚೂಡಿದಾರ ಶಾಲ್ ನಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Happy
Happy
0 %
Sad
Sad
100 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *