
Read Time:57 Second
ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಒಳನುಗ್ಗಿ ಸುಮಾರು ಹದಿಮೂರು ಲಕ್ಷ ಬೆಲೆಬಾಳುವ ಚಿನ್ನಾಭರಣ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬೆಳ್ತಂಗಡಿಯ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ.


ಮನೆಯ ಯಜಮಾನಿ ವಸಂತಿ ಹೆಗ್ಡೆ ಮತ್ತು ಅವರ ಮಗ-ಸೊಸೆ ಮನೆಗೆ ಬೀಗ ಹಾಕಿ ಬೆಳ್ತಂಗಡಿಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಖದೀಮರು ಬೀಗ ಮುರಿದು ಮನೆಗೆ ನುಗ್ಗಿದ್ದಾರೆ.
ಮನೆಯ ಕೋಣೆಯ ಕಪಾಟಿನಲ್ಲಿಟ್ಟಿದ್ದ ಹದಿಮೂರು ಲಕ್ಷ, ಎಪ್ಪತ್ತು ಸಾವಿರ ಬೆಲೆಬಾಳುವ ಚಿನ್ನಾಭರಣ ಮತ್ತು ಮೂವತ್ತು ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

