ಬೆಳ್ತಂಗಡಿ: ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್..!

0 0
Read Time:2 Minute, 28 Second

ಬೆಳ್ತಂಗಡಿ : ಬೆಳ್ತಂಗಡಿ ಮಿತ್ತಬಾಗಿಲು ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕನೊಬ್ಬನ ಮೇಲೆ ಇದೀಗ ವಿಧ್ಯಾರ್ಥಿನಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಪ್ರಿಯಕರನ ವಂಚನೆಗೆ ಬಲಿಯಾಗಿ 17 ವರ್ಷದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. 17 ವರ್ಷದ ಹೃಷ್ಟಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಳು. ನವೆಂಬರ್​ 20 ರಂದು ಹೃಷ್ಟಿ ವಿಷ ಸೇವಿಸಿದ್ದರು. ಚಿಕಿತ್ಸೆ ಫಲಿಸದೇ ಅಪ್ರಾಪ್ತ ಯುವತಿ ಹೃಷ್ವಿ ಕೊನೆಯುಸಿರೆಳೆದಿದ್ದಾರೆ. ಹೃಷ್ಟಿ ಹಾಗೂ ಆಕೆಯ ಸಂಬಂಧಿ ಯುವಕ ಪ್ರವೀಣ್‌ ಪ್ರೀತಿ ಮಾಡುತ್ತಿದ್ದರು ಎಂದು ಹೇಳಲಾಗಿದ್ದು, ಮದುವೆ ಆಗೋದಾಗಿ ನಂಬಿಸಿ ವಂಚನೆ ಆರೋಪ ಮಾಡಲಾಗಿದೆ. ಪ್ರವೀಣ್ ವಿರುದ್ಧ ಹೃಷ್ವಿ ಪೋಷಕರಿಂದ ದೂರು ದಾಖಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹೃಷ್ವಿ ಆತ್ಮಹತ್ಯೆ ಬಳಿಕ ಆರೋಪಿ ಪ್ರವೀಣ್​ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಸಂಬಂಧಿ ಪ್ರವೀಣ್ ಜೊತೆ ಹೃಷ್ಟಿ ಪ್ರೇಮದಲ್ಲಿದ್ದಳು. ಮದುವೆ ಆಗುವುದಾಗಿ ಆಕೆಯೊಂದಿಗೆ ಪ್ರವೀಣ್‌ ಅನ್ಯೋನ್ಯವಾಗಿದ್ದ. ಆ ಬಳಿಕ ಮದುವೆ ಆಗೋದಿಲ್ಲ ಎಂದು ಆಕೆಗೆ ವಂಚನೆ ಮಾಡಿದ್ದಾನೆ. ಇದರಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಮಿತ್ತಬಾಗಿಲಿನ ಕೋಡಿ ನಿವಾಸಿಯಾಗಿರುವ ಹೃಷ್ಟಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೆಲ ದಿನಗಳ ಹಿಂದೆ ಆಕೆ ಅಚಾನಕ್‌ ಆಗಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಆರೋಪಿಗಾಗಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
100 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *