ಉಳ್ಳಾಲ ಗುಡ್ಡ ಕುಸಿತ: ಅವಶೇಷಗಳಡಿ ಸಿಲುಕಿದ್ದ ತಾಯಿ, ಮಗು..! ರಕ್ಷಣೆ ಮಾಡಿದ್ದ ಮಗು ಸಾವು

0 0
Read Time:2 Minute, 7 Second

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಇದೀಗ ಅವಶೇಷಗಳಡಿ ಸಿಲುಕಿದ್ದ ತಾಯಿ ಅಶ್ವಿನಿ ಹಾಗೂ ಮಗು ಆರುಷ್ ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗಿದೆ ಒಂದು ವರ್ಷದ ಮಗು ಆರುಷ್ ಕೊನೆಯುಸಿರೆಳಿದಿದ್ದಾನೆ.

ಹೌದು ಮಂಗಳೂರಿನ ಉಳ್ಳಾಲದಲ್ಲಿ ಗುಡ್ಡ ಕುಸಿತ ದುರಂತದಲ್ಲಿ ತಾಯಿ ಅಶ್ವಿನಿ ಹಾಗೂ ಮಗುವನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ರಕ್ಷಣೆ ಮಾಡಿದ್ದ ಆರುಷ್ ಇದೀಗ ಬದುಕುಳಿದಿಲ್ಲ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳಿದಿದ್ದಾನೆ. ಅಂಬುಲೆನ್ಸ್ ನಲ್ಲಿ ಮಗು ಆರುಷ್ ಸಾವನ್ನಪ್ಪಿದ್ದಾನೆ ಎಂದು ಇದೀಗ ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಬಳಿಕ ತಾಯಿ ಅಶ್ವಿನಿ ಹಾಗೂ ತನ್ನ ಇನ್ನೋರ್ವ ಮಗು ಆರುಷ್ ನನ್ನು ಸಿಬ್ಬಂದಿಗಳು ರಕ್ಷಣೆ ಮಾಡಿದ್ದರು. ತಾಯಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ.

ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *