
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.



ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧಮ೯ದಶಿ೯ ಡಾ. ರವಿ.ಎನ್ ದೀಪ ಪ್ರಜ್ವಲಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸಲಿದ್ದಾರೆ. ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ್ ಒಡೆಯರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಕರಾವಳಿಯಲ್ಲಿ ಫರ್ನೀಚರ್ ಹಾಗೂ ಎಲೆಕ್ಟ್ರಾನಿಕ್ ಸಂಸ್ಥೆ ಸ್ಥಾಪಿಸಿ ಹಲವಾರು ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿಸಿದ್ದಲ್ಲದೇ, ಗುಣಮಟ್ಟದಲ್ಲಿ ಗ್ರಾಹಕರ ಮನಗೆದ್ದ ವಿ.ಕೆ ಸಮೂಹ ಸಂಸ್ಥೆಯ ಮಾಲಕರದ ಶ್ರೀ ವಿಠಲ್ ಕುಲಾಲ್ ಅವರಿಗೆ ಅತಿಥಿ ಗಣ್ಯರ ಸಮ್ಮುಖದಲ್ಲಿ “ಉದ್ಯಮ ಸಿಂಧೂರ” ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು


ಶ್ರೀ ವಿಠಲ್ ಕುಲಾಲ್ ಅವರ ಕಿರು ಪರಿಚಯ

ವಿಕೆ ಸಮೂಹ ಸಂಸ್ಥೆಯ ಮಾಲಕರು ವಿಠಲ್ ಕುಲಾಲ ರವರು ಕುಲಾಲ ಸಮುದಾಯದ ಒಂದು ಪ್ರತಿಷ್ಠಿತ ವ್ಯಕ್ತಿ. ಇವರು ಉದ್ಯಮ ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವರು ಯುವಕ- ಯುವತಿಯರಿಗೆ ತನ್ನ ಸಂಸ್ಥೆಯ ಮೂಲಕ ಉದ್ಯೋಗವನ್ನು ನೀಡಿ ನಿರುದ್ಯೋಗಿಗಳಿಗೆ ಆಶಾ ಕಿರಣ ವಾಗಿದ್ದಾರೆ.
ಈಗಾಗಲೇ ಸಂಸ್ಥೆಯು ಹೆಮ್ಮರವಾಗಿ ಬೆಳೆದು ನಿಂತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫರ್ನೀಚರ್ ಹಾಗೂ ಎಲೆಕ್ಟ್ರಾನಿಕ್ ಸಂಸ್ಥೆಯು ಉತ್ತಮ ಗುಣಮಟ್ಟದ ವಸ್ತುಗಳನ್ನು ಗ್ರಾಹಕರಿಗೆ ನೀಡುವಲ್ಲಿ ಹೆಸರುವಾಸಿಯಾಗಿದೆ.
ವಿಠಲ್ ಕುಲಾಲ ಇವರು ಸಾಮಾಜಿಕವಾಗಿ,ಧಾರ್ಮಿಕವಾಗಿ ಮತ್ತು ಶೈಕ್ಷಣಿಕ ವಾಗಿ ಅದೆಷ್ಟೋ ಸಂಘ ಸಂಸ್ಥೆಗಳಿಗೆ ತೆರೆ ಮರೆಯಲ್ಲಿ ದೊಡ್ಡ ಮಟ್ಟದ ಸಹಕಾರ ನೀಡಿರುತ್ತಾರೆ. ಅದೇ ರೀತಿ ಕುಲಾಲ ಸಮುದಾಯದ ಪ್ರತಿಷ್ಠಿತ ಉದ್ದಿಮೆಯಲ್ಲಿ ಅದೆಷ್ಟೋ ಯುವಕ ಯುವತಿಯರಿಗೆ ಸ್ಪೂರ್ತಿದಾಯಕರಾಗಿದ್ದಾರೆ. ಇವರಿಗೆ ಈ ಬಾರಿಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಯ ಒಕ್ಕೂಟದ ಕುಂಭ ಕಲಾವಳಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ದಲ್ಲಿ “ಉದ್ಯಮ ಸಿಂಧೂರ” ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಿದೆ.

